2 ಮತ್ತು 4ನೇ ಶನಿವಾರ ರಜೆ ಪಡೆಯದ ನೌಕರರಿಗೆ ಹಿಂದಿನಂತೆ ರಜೆ ಮುಂದುವರಿಕೆ
ಬಿ.ಎಸ್. ಯಡಿಯೂರಪ್ಪ
ಬೆಂಗಳೂರು, ನ.30 - ರಾಜ್ಯ ಸರ್ಕಾರದ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯಲ್ಲಿ ಪ್ರತಿ ತಿಂಗಳು 2 ಮತ್ತು 4 ನೇ ಶನಿವಾರ ರಜೆ ಪಡೆಯದ ನೌಕರರಿಗೆ ಈ ಹಿಂದೆ ಇದ್ದಂತೆ 15 ಸಾಂದರ್ಭಿಕ ರಜೆ ಹಾಗೂ 2 ಪರಿಮಿತ ರಜೆಗಳನ್ನು ಮುಂದುವರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಹಲವಾರು ವರ್ಷಗಳಿಂದ ತಿಂಗಳ 2ನೇ ಶನಿವಾರ ರಜೆ ನೀಡಲಾಗುತ್ತಿದ್ದು, ಜೂನ್ ತಿಂಗಳ ಆದೇಶದಲ್ಲಿ ಪ್ರತಿ ತಿಂಗಳ 2ನೇ ಹಾಗೂ ನಾಲ್ಕನೇ ಶನಿವಾರ ರಜೆ ಮುಂದುವರಿಸಲು ಸರ್ಕಾರ ಆದೇಶಿಸಿತ್ತು.
ಇದರಿಂದಾಗಿ ಪ್ರಸ್ತುತ ರಜಾ ಸೌಲಭ್ಯಗಳನ್ನು ಪಡೆಯದ ಕೆಲ ಇಲಾಖೆಯ ನೌಕರರಿಗೆ ಸಾಂದರ್ಭಿಕ ರಜೆಗಳು 15 ರಿಂದ ಕಡಿತಗೊಳಿಸಿ 10ಕ್ಕೆ ಮಿತಿಗೊಳಿಸಲಾಗಿತ್ತು. ಇದರಿಂದ ರಜೆ ಪಡೆಯದ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಕಾರ್ಮಿಕರಿಗೆ ಅನಾನುಕೂಲವಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ ಮನವಿ ಮಾಡಿತ್ತು. ಸರ್ಕಾರವು ಮನವಿಗೆ ಮಣಿದು ಹಿಂದೆ ಇದ್ದಂತೆ ರಜಾ ದಿನಗಳನ್ನು ಮುಂದುವರಿಸುವಂತೆ ಯಡಿಯೂರಪ್ಪ ಸೂಚಿಸಿದ್ದಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 