2 ಮತ್ತು 4ನೇ ಶನಿವಾರ ರಜೆ ಪಡೆಯದ ನೌಕರರಿಗೆ ಹಿಂದಿನಂತೆ ರಜೆ ಮುಂದುವರಿಕೆ
ಬಿ.ಎಸ್. ಯಡಿಯೂರಪ್ಪ
ಬೆಂಗಳೂರು, ನ.30 - ರಾಜ್ಯ ಸರ್ಕಾರದ ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯಲ್ಲಿ ಪ್ರತಿ ತಿಂಗಳು 2 ಮತ್ತು 4 ನೇ ಶನಿವಾರ ರಜೆ ಪಡೆಯದ ನೌಕರರಿಗೆ ಈ ಹಿಂದೆ ಇದ್ದಂತೆ 15 ಸಾಂದರ್ಭಿಕ ರಜೆ ಹಾಗೂ 2 ಪರಿಮಿತ ರಜೆಗಳನ್ನು ಮುಂದುವರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಹಲವಾರು ವರ್ಷಗಳಿಂದ ತಿಂಗಳ 2ನೇ ಶನಿವಾರ ರಜೆ ನೀಡಲಾಗುತ್ತಿದ್ದು, ಜೂನ್ ತಿಂಗಳ ಆದೇಶದಲ್ಲಿ ಪ್ರತಿ ತಿಂಗಳ 2ನೇ ಹಾಗೂ ನಾಲ್ಕನೇ ಶನಿವಾರ ರಜೆ ಮುಂದುವರಿಸಲು ಸರ್ಕಾರ ಆದೇಶಿಸಿತ್ತು.
ಇದರಿಂದಾಗಿ ಪ್ರಸ್ತುತ ರಜಾ ಸೌಲಭ್ಯಗಳನ್ನು ಪಡೆಯದ ಕೆಲ ಇಲಾಖೆಯ ನೌಕರರಿಗೆ ಸಾಂದರ್ಭಿಕ ರಜೆಗಳು 15 ರಿಂದ ಕಡಿತಗೊಳಿಸಿ 10ಕ್ಕೆ ಮಿತಿಗೊಳಿಸಲಾಗಿತ್ತು. ಇದರಿಂದ ರಜೆ ಪಡೆಯದ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಕಾರ್ಮಿಕರಿಗೆ ಅನಾನುಕೂಲವಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರಕ್ಕೆ ಮನವಿ ಮಾಡಿತ್ತು. ಸರ್ಕಾರವು ಮನವಿಗೆ ಮಣಿದು ಹಿಂದೆ ಇದ್ದಂತೆ ರಜಾ ದಿನಗಳನ್ನು ಮುಂದುವರಿಸುವಂತೆ ಯಡಿಯೂರಪ್ಪ ಸೂಚಿಸಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 