ಕಾಶ್ಮೀರ ಕಣಿವೆಯಲ್ಲಿ ಮುಷ್ಕರ ಮುಂದುವರಿಕೆ: ವ್ಯಾಪಾರ-ವಹಿವಾಟು ಸ್ಥಗಿತ
ಶ್ರೀನಗರ, ಅಕ್ಟೋಬರ್ 27: ಜಮ್ಮು-ಕಾಶ್ಮೀರದಲ್ಲಿ 370 ಮತ್ತು 35 ಎ ವಿಧಿಗಳನ್ನು ರದ್ದುಪಡಿಸಿರುವುದು ಹಾಗೂ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿರುವುದರ ವಿರುದ್ಧ ಕಾಶ್ಮೀರ ಕಣಿವೆಯಲ್ಲಿ ಆಗಸ್ಟ್ 5 ರಿಂದ ಜನರು ನಡೆಸುತ್ತಿರುವ ಪ್ರತಿಭಟನೆ ಶನಿವಾರವೂ ಮುಂದುವರೆದಿದ್ದು, ವ್ಯಾಪಾರ ಮತ್ತು ಇತರ ಚಟುವಟಿಕೆಗಳು ಸ್ಥಗಿತಗೊಂಡಿವೆ. ಕಣಿವೆಯ ಯಾವುದೇ ಭಾಗದಲ್ಲಿ ಶನಿವಾರ ಯಾವುದೇ ರೀತಿಯ ಕರ್ಪೊ ನಿರ್ಬಂಧವಿಲ್ಲವಾದರೂ ಕಾನೂನು ಮತ್ತು ಸುವ್ಯವಸ್ಥೆ ತಡೆಗಟ್ಟಲು ಸೆಕ್ಷನ್ 144 ಅಡಿಯಲ್ಲಿ ನಿರ್ಬಂಧಗಳು ಮುಂದುವರಿಯುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಗಸ್ಟ್ 5 ರಂದು ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡ ಕೂಡಲೇ ಯಾವುದೇ ಪ್ರತಿಭಟನೆಗಳನ್ನು ತಡೆಯಲು ಕಾಶ್ಮೀರ ಕಣಿವೆಗೆ ಹೆಚ್ಚುವರಿ ಕೇಂದ್ರ ಅರೆಸೈನಿಕ ಪಡೆ (ಸಿಪಿಎಂಎಫ್) ನಿಯೋಜಿಸಲಾಗಿತ್ತು. ಕಣಿವೆಯಲ್ಲಿ ಶನಿವಾರ ಕಲ್ಲು ತೂರಾಟದ ಕೆಲವು ಘಟನೆಗಳನ್ನು ಹೊರತುಪಡಿಸಿ, ಪರಿಸ್ಥಿತಿ ಶಾಂತಿಯುತವಾಗಿತ್ತು. ಆದರೂ ಕಣಿವೆಯಲ್ಲಿ ಸುಮಾರು 300 ಕ್ಕೂ ಹೆಚ್ಚು ಭದ್ರತಾ ಪಡೆ ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ಅಧಿಕೃತ ವರದಿಯಲ್ಲಿ ತಿಳಿಸಲಾಗಿದೆ. ಈ ಮಧ್ಯೆ ಹುರಿಯತ್ ಸಮ್ಮೇಳನದ (ಎಚ್ಸಿ) ಅಧ್ಯಕ್ಷ ಮಿವರ್ಾಯಿಜ್ ಮೌಲ್ವಿ ಒಮರ್ ಫಾರೂಕ್ ಅವರ ಭದ್ರಕೋಟೆಯಾದ ಐತಿಹಾಸಿಕ ಜಾಮಿಯಾ ಮಸೀದಿ ಆಗಸ್ಟ್ 5 ರಿಂದ ಮುಚ್ಚಲ್ಪಟ್ಟಿದ್ದು, ಪ್ರರ್ಥನಾ ಸ್ಥಳದ ಎಲ್ಲಾ ಮುಖ್ಯ ದ್ವಾರಗಳನ್ನು ಮುಚ್ಚಲಾಗಿದೆ. ಕಣಿವೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 5 ರಿಂದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ಎನ್ಎಲ್) ಸೇರಿದಂತೆ ಎಲ್ಲಾ ಮೊಬೈಲ್ ಕಂಪನಿಗಳ ಮೆಸೇಜ್ ಸೇವೆ (ಎಸ್ಎಂಎಸ್) ನೆಟ್ವರ್ಕ್ ಜೊತೆಗೆ ಅಂತರ್ಜಾಲ ಸೇವೆ ಮತ್ತು ಪೂರ್ವ ಪಾವತಿ ಮೊಬೈಲ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಉತ್ತರ ಕಾಶ್ಮೀರದ ಬಾರಾಮುಲ್ಲಾ ಮತ್ತು ಜಮ್ಮು ಪ್ರದೇಶದ ಬನಿಹಾಲ್ ನಡುವಿನ ರೈಲು ಸೇವೆಯನ್ನು ಆಗಸ್ಟ್ 5 ರಿಂದ ಭದ್ರತಾ ಕಾರಣಗಳಿಗಾಗಿ ಸ್ಥಗಿತಗೊಳಿಸಲಾಗಿದೆ. ವಿದ್ಯಾರ್ಥಿಗಳು ತರಗತಿಗಳಿಂದ ದೂರವಿದ್ದಾರೆ. ಬೇಸಿಗೆ ರಾಜಧಾನಿ, ಶ್ರೀನಗರ ಮತ್ತು ಹೊರವಲಯದಲ್ಲಿ ಆಗಸ್ಟ್ 5 ರಿಂದ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ವಾಹನಗಳು ರಸ್ತೆಗಿಳಿಯುತ್ತಿಲ್ಲ. ಸಿಆರ್ ಪಿಎಫ್ ವಾಹನದ ಮೇಲೆ ಶನಿವಾರ ಸಂಜೆ ಗ್ರೆನೇಡ್ ದಾಳಿಯ ನಂತರ ಅಲ್ಲಲ್ಲಿ ವಿರಳವಾಗಿ ತೆರೆಯಲಾಗಿದ್ದ ಅಂಗಡಿಗಳು ಮುಚ್ಚಲ್ಪಟ್ಟಿವೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 