ಕಾರವಾರದಲ್ಲಿ ಮುಂದುವರಿದ ಕಡಲ್ಕೊರೆತ ಮಳೆ ಅಬ್ಬರ ಕಡಿಮೆಯಾದರೂ ಕಡಲ ಅಬ್ಬರ ನಿಂತಿಲ್ಲ
ಕಾರವಾರ : ಬುಧುವಾರ ಮಳೆ ಸ್ವಲ್ಪ ಇಳಿಮುಖವಾದರೂ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಕಡಲ್ಕೊರೆತ ಹೆಚ್ಚಾಗಿದೆ. ಸಮುದ್ರದ ಅಲೆಗಳ ಅಬ್ಬರ ದಿನೇ ದಿನೇ ಹೆಚ್ಚುತ್ತಲೇ ಇದೆ. ಕಡಲತೀರದ ಅಂಚಿಗೆ ಇರುವ ಶಿಲ್ಪವನದ ಬಳಿ ಕಡಲ್ಕೊರೆತ ಇಮ್ಮಡಿಸಿದೆ. ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಕಡಲ ಅಬ್ಬರ ನಿಂತಿಲ್ಲ.
ಬಂದರು ಹೂಳನ್ನು ದಶಕಗಳ ನಂತರ ತೆಗೆದಿದ್ದು, ಕಡಲ್ಕೊರೆತಕ್ಕೆ ಕಾರಣ ಎಂಬ ಮಾತು ಕೇಳಿ ಬರುತ್ತಿದೆ. ಆದರೆ ಹವಮಾನ ಇಲಾಖೆ ಗಾಳಿಯ ಬೀಸುವಿಕೆ ಮತ್ತು ಆಳ ಸಮುದ್ರದಲ್ಲಿನ ತಳ ಭಾಗದ ಬದಲಾವಣೆಗಳು ಸಮುದ್ರದ ಅಲೆಗಳ ಅಬ್ಬರಕ್ಕೆ ಕಾರಣ ಎನ್ನುತ್ತಿವೆ. ಕಡಲ್ಕೊರೆತ ಎಂಬುದು ಸಮುದ್ರದ ಸಹಜ ಪ್ರಕ್ರಿಯೆ. ಇದು ಪ್ರತಿ ವರ್ಷಕ್ಕೂ ಭಿನ್ನ ಸ್ವರೂಪದಲ್ಲಿರುತ್ತದೆ.
ಹಾಗಾಗಿ ಸಮುದ್ರದ ಅಂಚಿಗೆ ಯಾವುದೇ ಶಾಶ್ವತ ಕಟ್ಟಡಗಳನ್ನು ಕಟ್ಟಬಾರದು. ಈ ಕಾರಣಕ್ಕಾಗಿಯೇ ಸಿಆರ್ಝೆಡ್ ನಿಯಮಗಳು ರೂಪಿಸಿದ್ದು ಎಂಬುದು ಕಡಲ ವಿಜ್ಞಾನಿಗಳ ಅಭಿಮತ. ಕಡಲಿನ ರೌದ್ರ ಸ್ವರೂಪ ಹೆಚ್ಚುತ್ತಿದ್ದು, ದಡದ ಮೀನುಗಾರಿಕೆ ಕಾಣುವುದೇ ಅಪರೂಪವಾಗಿದೆ.
ಈ ವರ್ಷವಂತೂ ದೊಡ್ಡ ಪ್ರಮಾಣದ ರಂಪಣಿ ಮೀನುಗಾರಿಕೆ ಆರಂಭವೇ ಆಗಿಲ್ಲ. ಸಂಪ್ರದಾಯಿಕ ಮೀನುಗಾರಿಕೆಯ ಪದ್ಧತಿಗಳಿಗೆ ಸಮುದ್ರದ ಅಲೆಗಳು ಪೂರಕವಾಗಿಲ್ಲ. ಹಾಗಾಗಿ ಪಾತಿ ದೋಣಿಯಲ್ಲಿ ಮೀನು ಹಿಡಿಯುವವರು ಸಹ ಕಡಲಿಗೆ ಇಳಿಯುವ ಸಾಹಸ ಮಾಡಿಲ್ಲ. ಮೀನುಗಾರಿಕಾ ಇಲಾಖೆ ಮತ್ತು ಜಿಲ್ಲಾಡಳಿತ ಮೀನುಗಾರಿಕೆಯನ್ನು ಮಳೆಗಾಲದಲ್ಲಿ ನಿಷೇಧಿಸಿದ್ದು ಯಾವುದೇ ಮೀನುಗಾರರು ಕಡಲಿಗೆ
ಇಳಿದಿಲ್ಲ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 