ಮಕ್ಕಳ ಶೈಕ್ಷಣಿಕ ಪ್ರಗತಿಗೆ ನಿರಂತರ ಕಲಿಕೆ ಅಗತ್ಯ
Continuous learning is essential for children's academic progress
ಹೂವಿನ ಹಡಗಲಿ 10: ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕೆಲಸ ನಿರಂತರವಾಗಿ ಆಗಬೇಕು ಎಂದು ಡಯಟ್ ಅಧಿಕಾರಿಗಳಾದ ಮಯೂರ್ ಗದುಗಿನ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಸೊಪ್ಪಿನ ವೀರಮ್ಮ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ 5 ದಿನಗಳ ಕಾಲ ಆಯೋಜಿಸಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಮರುಸಿಂಚನ ಜ್ಞಾನಸೇತು ಮೌಲ್ಯ ಶಿಕ್ಷಣ ಮಕ್ಕಳ ಹಕ್ಕುಗಳ ರಕ್ಷಣೆ, ಪೋಕ್ಸೋ ಕಾಯ್ದೆ ಕುರಿತು ತರಬೇತಿ ಶಿಬಿರದ ಸಮಾರೋಪದಲ್ಲಿ ಮಾತನಾಡಿದರು.ಶಿಬಿರದಲ್ಲಿ ಪಡೆದ ಜ್ಞಾನವನ್ನು ಶಾಲೆಯ ಮಕ್ಕಳಿಗೆ ಪ್ರಸರಿಸಬೇಕು ಎಂದು ಹೇಳಿದರು.
ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಶಿಕ್ಷಕರ ಬೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ತರಬೇತಿ ಶಿಬಿರ ಏರಿ್ಡಸಲಾಗಿದೆ. ಮಗುವಿನ ವಿಕಾಸಕ್ಕೆ ಪೂರಕವಾದ ವಾತಾವರಣ ಶಾಲೆಯಲ್ಲಿ ಕಲ್ಪಿಸಬೇಕು. ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿರಿ ಎಂದರು.ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ ಮಾತನಾಡಿದರು.ಸಂಪನ್ಮೂಲ ವ್ಯಕ್ತಿಗಳಾದ ಬಿ ಆರ್ ಪಿ ಸಚಿನ್ ಆರಾಧ್ಯ ಸಿ ಆರ್ ಪಿ ವೀರೇಶ್ ಬಗಲಿಚಿದಾನಂದ, ಕೊಟ್ರೇಶ್,ಮುಂಜುನಾಥ, ಸುನೀಲ್, ತರಬೇತಿ ನೀಡಿದರು. ತಾಲೂಕಿನ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳ 6 ರಿಂದ 8 ನೇ ತರಗತಿ ಬೋಧಿಸುವ 240ಶಿಕ್ಷಕರು ಇದರ ಪ್ರಯೋಜನ ಪಡೆದುಕೊಂಡರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 