ಜಾರಕಿಹೊಳಿ ಕುಟುಂಬದಿಂದ ನಿರಂತರವಾಗಿ ಸಮಾಜ ಸೇವೆ: ಪ್ರಿಯಂಕಾ ಜಾರಕಿಹೊಳಿ

Continuous social service from the Jarakiholi family: Priyanka Jarakiholi

ಜಾರಕಿಹೊಳಿ ಕುಟುಂಬದಿಂದ ನಿರಂತರವಾಗಿ ಸಮಾಜ ಸೇವೆ: ಪ್ರಿಯಂಕಾ ಜಾರಕಿಹೊಳಿ  

ಚಿಕ್ಕೋಡಿ 15: ಕಳೆದ 20 ವರ್ಷಗಳಿಂದ ತಂದೆ ಸಚಿವ ಸತೀಶ ಜಾರಕಿಹೊಳಿ ಅವರು ಸಾಧಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾನು ಸಂಸದೆಯಾದ ಬಳಿಕ ಮೊದಲ ಬಾರಿಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದೇನೆ. ನಿರಂತರವಾಗಿ ಜಾರಕಿಹೊಳಿ ಕುಟುಂಬ ಸಮಾಜ ಸೇವೆಯಲ್ಲಿ ನಿರತವಾಗಿದೆ ಎಂದು ಸಂಸದೆ ಪ್ರಿಯಂಕಾ ಜಾರಕಿಹೊಳಿ ಹೇಳಿದರು.  

ಚಿಕ್ಕೋಡಿ ಪಟ್ಟಣದ ಲೋಕೋಪಯೋಗಿ ಸಭಾಭವನದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಗೆ ವಿಪೂಲವಾದ ಅವಕಾಶ ಇದೆ. ಅವುಗಳನ್ನು ಸದುಪಯೋಗ ಪಡಿಸಿಕೊಳ್ಳುವ ಕೆಲಸ ವಿದ್ಯಾರ್ಥಿಗಳು ಮಾಡಬೇಕು. ಉತ್ತಮ ನಡೆ ನುಡಿ ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡು ತಂದೆ-ತಾಯಿ ಆಶಿರ್ವಾಧದಿಂದ ಜೀವನದಲ್ಲಿ ಸಾಧನೆ ಮೆಟ್ಟಿಲೇರಬೇಕು ಎಂದರು. 

ಕಠಿಣವಾದ ಪರಿಶ್ರಮ, ಶ್ರದ್ಧೆಯಿಂದ ಕಾಯಕದಲ್ಲಿ ತೊಡಗಿದರೆ ಯಶಸ್ಸು ನಿಶ್ಚಿತ,ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಮಕ್ಕಳು ಪ್ರತಿಭೆ ಹೊಂದಿದ್ದರೆ ಅದನ್ನು ಪ್ರೊತ್ಸಾಹಿಸುವ ಕೆಲಸ ನಾನು ಮಾಡುತ್ತೇನೆ ಎಂದರು. 

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಕ್ಷೆತ್ರದಲ್ಲಿ ಭಾರಿ ಪೈಪೋಟಿ ಇದೆ. ಯಾವುದರಲ್ಲಿ ಹೋದರೆ ನಮಗೆ ಅನುಕೂಲವಾಗುತ್ತದೆಂದು ಮೊದಲು ತಿಳಿದುಕೊಳ್ಳಬೇಕು. ಮುಂದಿನ ಶಿಕ್ಷಣದ ಬಗ್ಗೆ ವಿದ್ಯಾರ್ಥಿಗಳು ಚರ್ಚೆಸಿ ಒಳ್ಳೆಯ ನಿರ್ಧಾರ ಕೈಗೊಳ್ಳಬೇಕು.ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಿಬೇಕು.ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿ ವೇತನದ ಯೋಜನೆಗಳು ಲಭ್ಯವಿದ್ದು ಅದರ ಲಾಭವನ್ನು ಪಡೆದುಕೊಳ್ಳಬೇಕು.ಓದುವ ಹವ್ಯಾಸ ನಿರಂತರವಾಗಿರಬೇಕು.ತಂದೆ ಸತೀಶ ಜಾರಕಿಹೊಳಿಯವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ ಎಂದರು. 

ಶಾಸಕ ಗಣೇಶ ಹುಕ್ಕೇರಿ ಮಾತನಾಡಿ ಶಿಸ್ತು,ಸಮಯ,ಕಠಿಣವಾದ ಪರಿಶ್ರಮ ಇದ್ದರೆ ಸಂಕಲ್ಪವಾದ ಗುರಿ ಮುಟ್ಟಲು ಸಾಧ್ಯ. ಯಶಸ್ಸು ಸಾಧಿಸಲು ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಗುರಿಗಳನ್ನು ಇಟ್ಟುಕೊಳ್ಳಬೇಕು. ಶಿಕ್ಷಣಕ್ಕೆ ಯಾವತ್ತು ನಾನು ಪ್ರೊತ್ಸಾಹ ನೀಡುತ್ತಿದೇನೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿರುವ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಕಾರ್ಯ ಪ್ರಶಂಸನೀಯವಾಗಿದೆ. ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡುವ ದೃಷ್ಠಿಯಿಂದ ಚಿಕಕೋಡಿ-ಸದಲಗಾ ಕ್ಷೇತ್ರದಲ್ಲಿ ಎರಡು ಕೇಂದ್ರೀಯ ವಿದ್ಯಾಲಯ, ವಸತಿ ಶಾಲೆಗಳು, ಪಾಲಿಟೇಕ್ನಿಕ್, ಜಿಟಿಟಿಸಿ ಹೀಗೆ ಹಲವು ಕಾಲೇಜುಗಳನ್ನು ಮಂಜೂರು ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದರು. 

ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ಮಾತನಾಡಿ ಶಿಕ್ಷಣದಲ್ಲಿ ಅಗಾಧವಾದ ಶಕ್ತಿ ಇದೆ.ಶಿಕ್ಷಣ ಪಡೆದರೆ ಒಳ್ಳೆಯ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯ.ಸರ್ಕಾರ ಶಿಕ್ಷಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ.ಇದರ ಲಾಭವನ್ನು ಪಡೆದುಕೊಂಡು ವಿದ್ಯಾರ್ಥಿಗಳು ಸುಂದರವಾದ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು. 

ಖಡಿಪಿಐ ಆರ್‌.ಎಸ್‌.ಸೀತಾರಾಮು ಮಾತನಾಡಿ ಪ್ರಸಕ್ತ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಗುಣಾತ್ಮಕ ಫಲಿತಾಂಶ ಬಂದಿದೆ. ರಾ​‍್ಯಂಕದಲ್ಲಿ ಹಿನ್ನಡೆ ಬಂದರೂ ಸಹ ಪ್ರತಿಭಾವಂತ ಮಕ್ಕಳಿಗೆ ಗುಣಾತ್ಮಕ ಫಲಿತಾಂಶ ಸಿಕ್ಕಿದೆ. ಪಾಲಕರು ಮಕ್ಕಳನ್ನು ಪ್ರತಿನಿತ್ಯ ಶಾಲೆಗೆ ಕಳಿಸಿ ಶಿಕ್ಷಣದ ಪ್ರಗತಿಗೆ ಪ್ರೊತ್ಸಾಹಿಸಬೇಕು ಎಂದರು. 

ಉಪನ್ಯಾಸಕ ವಿಶ್ವನಾಥ ಚೌಗಲೆ ಮಾತನಾಡಿ ಮೊಬೈಲಗಳಿಗೆ ಮಕ್ಕಳು ಅಂಟಿಕೊಳ್ಳುತ್ತಿರುವುದು ಶಿಕ್ಷಣ ಕುಂಠಿತಕ್ಕೆ ಕಾರಣವಾಗಬಹುದು. ಪಾಲಕರು ಮೊಬೈಲ್‌ದಿಂದ ದೂರ ಇರಿಸಬೇಕು. ಮನೆಯ ಸಂಸ್ಕೃತಿ, ಮೌಲ್ಯಗಳು ತಿಳಿಹೇಳಬೇಕಾದ ಅನಿವಾರ್ಯತೆ ಇದೆ ಎಂದರು. 

ವೇದಿಕೆ ಮೇಲೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ, ಪದವಿ ಪೂರ್ವ ಉಪನಿರ್ದೇಶಕ ಪಿ.ಐ.ಭಂಡಾರಿ, ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಎ.ಕುಂಬಾರ, ಶಿವಾನಂದ ಮರಾ​‍್ಯಯಿ, ಅನಂತ ಮೋಹಿತೆ, ರಾಮಕೃಷ್ಣ ಪಾನಬುಡೆ, ಕೆಪಿಸಿಸಿ ಸದಸ್ಯ ರಾಜು ಕೊಟಗಿ, ವಿನಾಯ ಕುಂಬಾರ, ಅರ್ಜುನ ನಾಯಿಕವಾಡಿ, ಪುರಸಭೆ ಮಾಜಿ ಅಧ್ಯಕ್ಷ ಪಿ.ಐ.ಕೋರೆ, ಪಿರೋಜ ಕಲಾವಂತ, ಪುರಸಭೆ ಸದಸ್ ಗುಲಾಬ ಬಾಗವಾನ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪ್ರಭಾವತಿ ಪಾಟೀಲ, ಅಜೀತ ಮನ್ನಿಕೇರಿ ಮುಂತಾದವರು ಇದ್ದರು.  

ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಸ್ವಾಗತಿಸಿದರು. ಸವಿತಾ ಕೋಕರಿ ನಿರೂಪಿಸಿದರು.  

================================= 

ಚಿಕ್ಕ ವಯಸ್ಸಿನಲ್ಲಿ ಸಂಸದರಾಗಿ ಸಮಾಜ ಸೇವೆಯಲ್ಲಿ ಗುರ್ತಿಸಿಕೊಂಡು ಶಿಕ್ಷಣದಲ್ಲಿ ಸಾಧನೆ ಮಾಡಿರುವ ಪ್ರತಿಭಾವಂತ ಮಕ್ಕಳನ್ನು ಪ್ರೊತ್ಸಾಹ ಮಾಡುವ ಸಂಕಲ್ಪ ಇಟ್ಟುಕೊಂಡಿರುವ ಸಂಸದೆ ಪ್ರಿಯಂಕಾ ಜಾರಕಿಹೊಳಿ ಕಾರ್ಯ ಶ್ಲಾಘನೀಯವಾಗಿದೆ. ತಂದೆಯ ಹಾಗೇ ಮಗಳು ಸಹ ಪ್ರತಿಗಳನ್ನು ಪ್ರೊತ್ಸಾಹ ಕೆಲಸ ಮಾಡುತ್ತಿರುವುದು ಸಂತಸ ತಂದಿದೆ.ಹೀಗೆ ಅವರು ಸಮಾಜಮುಖಿ ಕೆಲಸ ಮಾಡಬೇಕು. 

              ಲಕ್ಷ್ಮಣರಾವ ಚಿಂಗಳೆ ಬುಡಾ ಅಧ್ಯಕ್ಷರು ಬೆಳಗಾವಿ. 


ಇತ್ತೀಚಿನ ಸುದ್ದಿ