ಸಹಕಾರಿ ಸಂಘದಿಂದ ರೈತರಿಗೆ ಅನುಕೂಲ: ಆಚಾರ
ಲೋಕದರ್ಶನ ವರದಿ
ಯಲಬುರ್ಗಾ 08: ಸಹಕಾರಿ ಸಂಘಗಳು ರೈತರ ಪಾಲಿಗೆ ಸಂಜೀವಿನಿಯಾಗಿ ಕಾರ್ಯನಿರ್ವಹಿಸುತ್ತಿವೆ ಅದರಂತೆ ರೈತರು ಇದರ ಲಾಭ ಪಡೆಯಬೇಕು ಎಂದು ಶಾಸಕ ಹಾಲಪ್ಪ ಆಚಾರ ಹೇಳಿದರು.
ತಾಲೂಕಿನ ಕಲ್ಲಭಾವಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ ನೇರವೇರಿಸಿ ಅವರು ಮಾತನಾಡಿದರು.
ರೈತರು ಹೆಚ್ಚಿನ ಸಂಖ್ಯೆಯಲ್ಲಿ ಹಸುಗಳನ್ನು ಸಾಕಬೇಕು ಅದರಿಂದ ನಿಮಗೆ ದಿನನಿತ್ಯದ ಆದಾಯ ಬರುತ್ತದೆ ದೇಶೀಯ ತಳಿಯ ಗೋವುಗಳನ್ನು ಸಂರಕ್ಷಿಸುವ ಅವಶ್ಯಕತೆ ಇದೆ, ಹಾಗೂ ಸಹಕಾರಿ ಸಂಘದಿಂದ ರೈತರಿಗೆ ಹಲವಾರು ಉತ್ತಮ ಯೋಜನೆಗಳಿದ್ದು ಅವುಗಳು ನೀಜವಾದ ರೈತರಿಗೆ ತಲುಪುವಂತೆ ಆಡಳಿತ ಮಂಡಳಿಯವರು ನೋಡಿಕೊಳ್ಳಬೇಕು ಹೆಚ್ಚು ಹೆಚ್ಚು ಸದಸ್ಯರನ್ನು ನೊಂದಣಿ ಮಾಡಿಕೊಂಡು ಸಂಘವನ್ನು ಉನ್ನತ ಮಟ್ಟದಲ್ಲಿ ಬೆಳೆಸಬೇಕು ಗ್ರಾಮೀಣ ಪ್ರದೇಶದಲ್ಲಿ ಕೃಷಿ ಕಾಮರ್ಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ಅವರೆಲ್ಲರಿಗೂ ಸಹಕಾರಿ ಸಂಘಗಳ ಮಾಹಿತಿ ದೊರಕಬೇಕು ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಶಿವಕುಮಾರ ನಾಗಲಾಪೂರಮಠ, ಶರಣಪ್ಪ ಬಣ್ಣದಭಾವಿ, ವಿಜಯಕುಮಾರ ತಾಳಕೇರಿ, ಕೆಎಂಎಪ್ ಉಪಾಧ್ಯಕ್ಷ ಶಿವಪ್ಪ ವಾದಿ, ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 