ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಹಕಾರ ನೀಡಿ: ಖಾದ್ರಿ
ಲೋಕದರ್ಶನವರದಿ
ವಿಜಯಪುರ೨೯: ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಹಕಾರ ನೀಡಬೇಕು. ಮಕ್ಕಳನ್ನು ತಪ್ಪದೆ ಶಾಲೆಗೆ ಕಳುಹಿಸಬೇಕು ಎಂದು ಸಿಕ್ಯಾಬ ಶಿಕ್ಷಣ ಸಂಸ್ಥೆಯ ಚಾಂದಬೀಬೀ ಪ್ರೌಡಶಾಲೆಯ ಮುಖ್ಯಗುರು ಎಸ್ ಎಸ್ ಖಾದ್ರಿ ಕರೆ ನೀಡಿದರು.
ಮಂಗಳವಾರ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾದ 2019-20 ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ನೇತೃತ್ವ ವಹಿಸಿ ಮಾತನಾಡಿದ ಅವರು, ಶಿಕ್ಷಣ ಇಂದಿನ ದಿನಗಳಲ್ಲಿ ಅತ್ಯಂತ ಅವಶ್ಯವಾಗಿದೆ. ಆಧನಿಕ ಯುಗದಲ್ಲಿ ಸ್ಪಧರ್ಾತ್ಮಕತೆ ಹೆಚ್ಚಾಗಿದ್ದು, ಪ್ರತಿಯೊಂದು ಶಾಲೆಗಳು ಮಕ್ಕಳ ಭವಿಷ್ಯತ್ತಿಗಾಗಿ ಶ್ರಮಿಸುತ್ತಿದ್ದು, ನಿರಂತರವಾಗಿ ಮಗು ಶಾಲೆಗೆ ಬಂದರೆ ಪಲಿತಾಂಶ ಉತ್ತಮ ಬರಲು ಸಾಧ್ಯವಾಗುತ್ತದೆ. ಶೈಕ್ಷಣಿಕ ಪ್ರಕ್ರಿಯೆಯಲ್ಲಿ ಪಾಲಕರು ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಶಾಲೆ ಹಾಗೂ ವಾರಣವನ್ನು ಶ್ರೀಂಘರಿಸಲಾಗಿತ್ತು. ಮಕ್ಕಳ ಆಗಮನವಾದ ನಂತರ ಅವರನ್ನು ಅತ್ಯಂತ ಆತ್ಮೀಯವಾಗಿ ಭರ ಮಾಡಿಕೊಳ್ಳಲಾಯಿತು ಸಿಹಿ ಹಂಚಿ ಪ್ರಸಕ್ತ ವರ್ಷದ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಸಹಶಿಕ್ಷಕರಾದ ಶೈತಾಜ್ ಮುಲ್ಲಾ, ಮಾಂತಾ ಬಾಗೋಜಿಕೊಪ್ಪ, ಮಹಮ್ಮದಲಿ ನಬೀವಾಲೆ, ರಾಜೇಸಾಬ ತಿಕೋಟಿ, ಖಲೀಲ ಜಾಹಾಗಿರದಾರ ಸೇರಿದಂತೆ ಶಿಕ್ಷಕರು, ಸಿಬ್ಬಂಧಿ, ಶಾಲಾ ಮಕ್ಕಳು ಪಾಲ್ಗೊಂಡಿದ್ದರು.
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು 