ಸಹಕಾರ ಸಂಘದ ಅಭಿವೃದ್ಧಿಗೆ ಸಹಕಾರ ಅಗತ್ಯ : ಹೆಚ್.ಜಗದೀಶ
Cooperation is necessary for the development of cooperative societies: H. Jagadeesh
ಕಂಪ್ಲಿ:ಆ.17. ಪಟ್ಟಣದ ಶಾರದಾ ಶಾಲೆಯ ಮೇಲ್ಭಾಗದಲ್ಲಿರುವ ಸಂಘದ ಕಛೇರಿ ಆವರಣದಲ್ಲಿ ವರಲಕ್ಷ್ಮೀ ಕ್ರೆಡಿಟ್ ಸಹಕಾರ ಸಂಘದಿಂದ ಹಮ್ಮಿಕೊಂಡಿದ್ದ 2024-25ನೇ ಸಾಲಿನ 22ನೇ ವಾರ್ಷಿಕ ಮಹಾಜನ ಸಭೆಯು ಸಂಘದ ಅಧ್ಯಕ್ಷ ಹೆಚ್.ಜಗದೀಶ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಎಮ್ಮಿಗನೂರು ಹಂಪಿ ಸಾವಿರ ದೇವರ ಮಠದ ವಾಮದೇವ ಮಹಾಂತ ಶಿವಾಚಾರ್ಯ ಮಹಾಸ್ವಾಮಿ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವದಿಸಿ ಮಾತನಾಡಿ, ಸಂಘವು ಅಭಿವೃದ್ಧಿಯೊಂದಿಗೆ ಉತ್ತುಂಗಕ್ಕೆ ಬೆಳೆಯಲಿ ಎಂದರು.
ಸಂಘದ ಅಧ್ಯಕ್ಷ ಹೆಚ್.ಜಗದೀಶ ಮಾತನಾಡಿ, ಸಂಘವು 12457 ಜನ ಸದಸ್ಯರನ್ನು ಹೊಂದಿದ್ದು, ಸುಮಾರು 8.9 ಕೋಟಿ ಶೇರು ಬಂಡವಾಳ ಇದೆ. ಮತ್ತು 75.61 ಕೋಟಿ ಠೇವಣಿ ಸಂಗ್ರಹಿಸಿದೆ. ಸಂಘವು 4.13.69.900 ರೂ.ಗಳ ನಿವ್ವಳ ಲಾಭಗಳಿಸಿದೆ. ಸಹಕಾರ ಸಂಘದ ಅಭಿವೃದ್ಧಿಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಟಿ.ಕೊಟ್ರೇಶ, ನಿರ್ದೇಶಕರಾದ ಡಿ.ವೀರ್ಪ, ವಾಲಿ ಕೊಟ್ರ್ಪ, ಕೆ.ಸಣ್ಣ ಗವಿಸಿದ್ದಪ್ಪ, ಚಂದ್ರಶೇಖರ ಬಣಗಾರ, ಹೆಚ್.ಮಂಜುನಾಥ, ಟಿ.ವೀರನಗೌಡ, ಕವಿತಾಳ ಚನ್ನಪ್ಪ, ವೀರನಗೌಡ ಎಸ್.ಪಾಟೀಲ್, ಸಿ.ಹೆಚ್.ಪಕ್ಕೀರ್ಪ, ಎನ್.ಯಂಕಪ್ಪ ಕೆ.ಉಷಾರಾಣಿ, ಮುಖ್ಯ ಕಾರ್ಯನಿರ್ವಾಹಕ ಎಂ.ಲೋಕೇಶ್ವರರೆಡ್ಡಿ, ಮುಖಂಡರಾದ ರಾಮಲಾಲ್ ಶೇಟ್, ವಾಗೀಶ್, ವಿದ್ಯಾಧರ, ಕರಿಬಸವನಗೌಡ ಸೇರಿದಂತೆ ಸಂಘದ ಸಿಬ್ಬಂದಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 