ಕರೋನ ಅಟ್ಟಹಾಸ, ಈವರೆಗೆ ದೇಶದಲ್ಲಿ ಮೃತರ ಸಂಖ್ಯೆ 437 ಕ್ಕೆ ಏರಿಕೆ
ನವದೆಹಲಿ, ಏ17, ದೇಶದಲ್ಲಿ ಮಾರಕ ಕೊರೊನಾ ಸೋಂಕಿಗೆ ಈವರೆಗೆ ಬಲಿಯಾದವರ ಸಂಖ್ಯೆ 437ಕ್ಕೆ ಏರಿಕೆಯಾಗಿದ್ದು, ಸೋಂಕಿತ ಪ್ರಕರಣಗಳ ಸಂಖ್ಯೆ 13,387 ಕ್ಕೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವಾಲಯ ಬೆಳಿಗ್ಗೆ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 1007 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, 23 ಮಂದಿ ಬಲಿಯಾಗಿದ್ದಾರೆ. ಇನ್ನು ಈವರೆಗೆ ಕಿಲ್ಲರ್ ಕೊರೊನಾಗೆ. ಈವರೆಗೆ 13,387 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಇನ್ನೆರಡು ಮೂರು ದಿನದಲ್ಲಿ 15 ಸಾವಿರದ ಗಡಿದಾಟುವ ಸಾಧ್ಯತೆ ಇದೆ.
-ದೆಹಲಿ - ಸೋಂಕಿತರ ಸಂಖ್ಯೆ 1,640, 38 ಮಂದಿ ಸಾವು.
-ಮಹಾರಾಷ್ಟ್ರ - 3,202 ಮಂದಿಯಲ್ಲಿ ಸೋಂಕು - 194 ಮಂದಿ ಸಾವು.
-ಮಧ್ಯಪ್ರದೇಶ - 1,164 ಮಂದಿಯಲ್ಲಿ ಸೋಂಕು - 55 ಮಂದಿ ಸಾವು.
-ಗುಜರಾತ್ - 929 ಸೋಂಕಿತರು - 36 ಮಂದಿ ಸಾವು .
-ತೆಲಂಗಾಣ - 700 ಜನರಿಗೆ ಸೋಂಕು - 18 ಜನ ಸಾವು.
-ಕರ್ನಾಟಕ - 315 ಕೊರೊನಾ ಪ್ರರಕಣ ದಾಖಲಾಗಿದ್ದು - 13 ಮಂದಿ ಸಾವು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 