ಕೊರೊನಾ : ರಾಜ್ಯಸಭಾ ಕಾರ್ಯದರ್ಶಿ ಕಚೇರಿ ಕಾರ್ಯಾಚರಣೆ ಪುನರಾರಂಭ
ನವದೆಹಲಿ, ಏ 20, ರಾಜ್ಯ ಸಭಾ ಕಾರ್ಯದರ್ಶಿ ಕಚೇರಿ 27 ದಿನಗಳ ನಂತರ ಸೋಮವಾರ ಪುನಃ ಕಾರ್ಯಾರಂಭ ಮಾಡಿದೆ. ಮಾರ್ಚ್ 25 ರಿಂದ ಲಾಕ್ ಡೌನ್ ಜಾರಿಯಾದ ಕಾರಣ ಕಚೇರಿ ತೆರೆದಿರಲಿಲ್ಲ. ಕಡಿಮೆ ಸಿಬ್ಬಂದಿಯೊಂದಿಗೆ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸದೇ ತುರ್ತು ಕೆಲಸಗಳತ್ತ ಗಮನಹರಿಸುವಂತೆ ರಾಜ್ಯಸಭಾಧ್ಯಕ್ಷ ಮತ್ತು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಸೂಚನೆ ನೀಡಿದ್ದಾರೆ. ಕೊರೊನಾ ವೈರಾಣು ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಂಸತ್ ಭವನದೊಳಗೆ ಪ್ರವೇಶಿಸುವ ವಾಹನಗಳ ನೈರ್ಮಲ್ಯ ಕಾರ್ಯ ಹಾಗೂ ಸಿಬ್ಬಂದಿಯ ಆರೋಗ್ಯ ತಪಾಸಣೆ ನಡೆಯಲಿದೆ ಎಂದು ವೆಂಕಯ್ಯನಾಯ್ಡು ಮಾಹಿತಿ ನೀಡಿದ್ದಾರೆ.ಲಾಕ್ ಡೌನ್ ಭಾಗಶಃ ತೆರವಾಗಿದ್ದು ಕೆಲಸಗಳನ್ನು ಮಾಡಲೇಬೇಕಾದ ಸಂಬಂಧಪಟ್ಟ ಎಲ್ಲರೂ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 