ಕೊರೋನಾ ಹಿನ್ನೆಲೆ: ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಒಂದು ದಿನದ ವೇತನ ನೀಡಬೇಕು - ಹೊರಟ್ಟಿ
ಬೆಂಗಳೂರು,
ಮಾ 29,ರಾಜ್ಯದಲ್ಲಿ ಕೊರೋನಾ ವೈರಸ್ ತೀವ್ರವಾಗಿರುವ ಹಿನ್ನೆಲೆಯಲ್ಲಿ
ಸಮಸ್ಯೆಗೆ ಸ್ಪಂದಿಸಲು ಅನುದಾನಿತ ಶಾಲೆಗಳ ಸಿಬ್ಬಂದಿ ತಮ್ಮ ಒಂದು ದಿನದ ವೇತನವನ್ನು
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಮರ್ಪಿಸಬೇಕು ಎಂದು ಜೆಡಿಎಸ್ ನ ಹಿರಿಯ ಮುಖಂಡ,
ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ. ವಿಶ್ವವ್ಯಾಪಿಯಾಗಿ
ತನ್ನ ಕದಂಭ ಬಾಹುಗಳನ್ನು ಕರಾಳವಾಗಿ ಚಾಚಿರುವ ಕೊರೋನಾ ಮಹಾಮಾರಿಯಿಂದ ರಕ್ಷಿಷಿಕೊಳ್ಳಲು
ಹಾಗೂ ಸೂಕ್ತ ವೈದ್ಯಕೀಯ ನೆರವು ಪಡೆಯಲು ಸಾಧ್ಯವಾಗುತ್ತಿಲ್ಲ. ಇಡೀ ಮನುಕುಲಕ್ಕೆ
ಸವಾಲಾಗಿರುವ ಈ ವೈರಸ್ಸಿನ ವಿರುದ್ಧ ಹೋರಾಟ ನಡೆದಿದ್ದು, ಈ ದಿಸೆಯಲ್ಲಿ ಕರ್ನಾಟಕ ರಾಜ್ಯ
ಸರಕಾರಿ ನೌಕರರು ತಮ್ಮ ಒಂದು ದಿನದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ
ಕೊಟ್ಟು ಕೈ ಜೋಡಿಸಿರುವುದು ಶ್ಲಾಘನೀಯ ಎಂದಿದ್ದಾರೆ.ಅದೇ ರೀತಿ ಅನುದಾನಿತ ಶಾಲಾ
ಕಾಲೇಜುಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ತಮ್ಮ ಒಂದು ದಿನದ ವೇತನವನ್ನು ಪರಿಹಾರ
ನಿಧಿಗೆ ಕೊಡುವ ಮೂಲಕ ಸರಕಾರದೊಂದಿಗೆ ಕೈ ಜೋಡಿಸಬೇಕು. ಈ ಮೂಲಕ ಕೊರೋನಾ ಮಹಾಮಾರಿಯಿಂದ
ಬಳಲುತ್ತಿರುವವರ ಬಾಳಿಗೆ ಬೆಳಕಾಗಬೇಕೆಂದು ಹೊರಟ್ಟಿ ಕೋರಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 