ಕೊರೋನಾ ಹಿನ್ನೆಲೆ: ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಒಂದು ದಿನದ ವೇತನ ನೀಡಬೇಕು - ಹೊರಟ್ಟಿ
ಬೆಂಗಳೂರು,
ಮಾ 29,ರಾಜ್ಯದಲ್ಲಿ ಕೊರೋನಾ ವೈರಸ್ ತೀವ್ರವಾಗಿರುವ ಹಿನ್ನೆಲೆಯಲ್ಲಿ
ಸಮಸ್ಯೆಗೆ ಸ್ಪಂದಿಸಲು ಅನುದಾನಿತ ಶಾಲೆಗಳ ಸಿಬ್ಬಂದಿ ತಮ್ಮ ಒಂದು ದಿನದ ವೇತನವನ್ನು
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಮರ್ಪಿಸಬೇಕು ಎಂದು ಜೆಡಿಎಸ್ ನ ಹಿರಿಯ ಮುಖಂಡ,
ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದಾರೆ. ವಿಶ್ವವ್ಯಾಪಿಯಾಗಿ
ತನ್ನ ಕದಂಭ ಬಾಹುಗಳನ್ನು ಕರಾಳವಾಗಿ ಚಾಚಿರುವ ಕೊರೋನಾ ಮಹಾಮಾರಿಯಿಂದ ರಕ್ಷಿಷಿಕೊಳ್ಳಲು
ಹಾಗೂ ಸೂಕ್ತ ವೈದ್ಯಕೀಯ ನೆರವು ಪಡೆಯಲು ಸಾಧ್ಯವಾಗುತ್ತಿಲ್ಲ. ಇಡೀ ಮನುಕುಲಕ್ಕೆ
ಸವಾಲಾಗಿರುವ ಈ ವೈರಸ್ಸಿನ ವಿರುದ್ಧ ಹೋರಾಟ ನಡೆದಿದ್ದು, ಈ ದಿಸೆಯಲ್ಲಿ ಕರ್ನಾಟಕ ರಾಜ್ಯ
ಸರಕಾರಿ ನೌಕರರು ತಮ್ಮ ಒಂದು ದಿನದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ
ಕೊಟ್ಟು ಕೈ ಜೋಡಿಸಿರುವುದು ಶ್ಲಾಘನೀಯ ಎಂದಿದ್ದಾರೆ.ಅದೇ ರೀತಿ ಅನುದಾನಿತ ಶಾಲಾ
ಕಾಲೇಜುಗಳ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ತಮ್ಮ ಒಂದು ದಿನದ ವೇತನವನ್ನು ಪರಿಹಾರ
ನಿಧಿಗೆ ಕೊಡುವ ಮೂಲಕ ಸರಕಾರದೊಂದಿಗೆ ಕೈ ಜೋಡಿಸಬೇಕು. ಈ ಮೂಲಕ ಕೊರೋನಾ ಮಹಾಮಾರಿಯಿಂದ
ಬಳಲುತ್ತಿರುವವರ ಬಾಳಿಗೆ ಬೆಳಕಾಗಬೇಕೆಂದು ಹೊರಟ್ಟಿ ಕೋರಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 