ಕೊರೊನ ಎಫೆಕ್ಟ್: ಬೀದಿ ವ್ಯಾಪಾರಸ್ಥರ ತೆರವು ಕಾರ್ಯಾಚರಣೆ
ಹುನಗುಂದ19: ಕೊರೊನಾ ವೈರಸ್ ಮಹಾಮಾರಿ ತಡೆಗಟ್ಟಲು ಜಿಲ್ಲಾಧಿಕಾರಿಗಳ ಆದೇಶದಂತೆ ಮುಂಜಾಗೃತಾ ಕ್ರಮವಾಗಿ ಪುರಸಭೆ ಮತ್ತು ಪಿಎಸೈ ನೇತೃತ್ವದಲ್ಲಿ ಬೀದಿ ವ್ಯಾಪಾರಸ್ಥರ ತೆರವು ಕಾಯರ್ಾಚರಣೆ ನಡೆಯಿತು. ಗುರುವಾರ ನಗರದ ಪುರಸಭೆ ಮತ್ತು ಪೊಲೀಸ್ ಇಲಾಖೆ ಸಹಯೋದಲ್ಲಿ ಕೋವಿಡ್-19 ವೈರಾಣುಗಳಿಂದ ಹರಡುವ ಅಪಾಯಕಾರಿ ಸಾಂಕ್ರಾಮಿಕ ಮಹಾಮಾರಿ ಕೊರೊನಾ ರೋಗವನ್ನು ತಡೆಗಟ್ಟು ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯನ್ನು ಕಾಪಾಡಿಕೊಳ್ಳಲು ಮುಂಜಾಗೃತಾ ಕ್ರಮವಾಗಿ ತಾಲೂಕಿನಲ್ಲಿ ಜರುಗುವ ವಾರದ ಸಂತೆಗಳನ್ನು ನಿಷೇಧಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಈರಣ್ಣ ಗುಡದಾರಿ ತಿಳಿಸಿದ್ದಾರೆ. ಈ ಕ್ರಮವು ಮಾ.3ರಿಂದ 23ರವರೆಗೆ ಹಾಗೂ ಸಂದಭರ್ಾನುಸಾರ ಊಜರ್ಿತಾವಧಿ ವಿಸ್ತರಿಸುವ ಷರತ್ತುಗಳು ಒಳಪಟ್ಟಿವೆ ಎಂದರು. ಜಿಲ್ಲಾಧಿಕಾರಿಗಳ ಮುಂದಿನ ಆದೇಶವಾಗುವವರೆಗೂ ಈ ಕ್ರಮ ಜಾರಿಯಲ್ಲಿದೆ. ನಗರದ ಎಲ್ಲ ವ್ಯಾಪಾರಸ್ಥರು ಸ್ವಯಂಪ್ರೇರಣೆಯಿಂದ ಸಹಕರಿಸಬೇಕೆಂದು ಪಿಎಸ್ಐ ಪುಂಡಲಿಕ್ ಪಟಾತರ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 