ಕೊರೊನ ಎಫೆಕ್ಟ್: ಬೀದಿ ವ್ಯಾಪಾರಸ್ಥರ ತೆರವು ಕಾರ್ಯಾಚರಣೆ
ಹುನಗುಂದ19: ಕೊರೊನಾ ವೈರಸ್ ಮಹಾಮಾರಿ ತಡೆಗಟ್ಟಲು ಜಿಲ್ಲಾಧಿಕಾರಿಗಳ ಆದೇಶದಂತೆ ಮುಂಜಾಗೃತಾ ಕ್ರಮವಾಗಿ ಪುರಸಭೆ ಮತ್ತು ಪಿಎಸೈ ನೇತೃತ್ವದಲ್ಲಿ ಬೀದಿ ವ್ಯಾಪಾರಸ್ಥರ ತೆರವು ಕಾಯರ್ಾಚರಣೆ ನಡೆಯಿತು. ಗುರುವಾರ ನಗರದ ಪುರಸಭೆ ಮತ್ತು ಪೊಲೀಸ್ ಇಲಾಖೆ ಸಹಯೋದಲ್ಲಿ ಕೋವಿಡ್-19 ವೈರಾಣುಗಳಿಂದ ಹರಡುವ ಅಪಾಯಕಾರಿ ಸಾಂಕ್ರಾಮಿಕ ಮಹಾಮಾರಿ ಕೊರೊನಾ ರೋಗವನ್ನು ತಡೆಗಟ್ಟು ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯನ್ನು ಕಾಪಾಡಿಕೊಳ್ಳಲು ಮುಂಜಾಗೃತಾ ಕ್ರಮವಾಗಿ ತಾಲೂಕಿನಲ್ಲಿ ಜರುಗುವ ವಾರದ ಸಂತೆಗಳನ್ನು ನಿಷೇಧಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಈರಣ್ಣ ಗುಡದಾರಿ ತಿಳಿಸಿದ್ದಾರೆ. ಈ ಕ್ರಮವು ಮಾ.3ರಿಂದ 23ರವರೆಗೆ ಹಾಗೂ ಸಂದಭರ್ಾನುಸಾರ ಊಜರ್ಿತಾವಧಿ ವಿಸ್ತರಿಸುವ ಷರತ್ತುಗಳು ಒಳಪಟ್ಟಿವೆ ಎಂದರು. ಜಿಲ್ಲಾಧಿಕಾರಿಗಳ ಮುಂದಿನ ಆದೇಶವಾಗುವವರೆಗೂ ಈ ಕ್ರಮ ಜಾರಿಯಲ್ಲಿದೆ. ನಗರದ ಎಲ್ಲ ವ್ಯಾಪಾರಸ್ಥರು ಸ್ವಯಂಪ್ರೇರಣೆಯಿಂದ ಸಹಕರಿಸಬೇಕೆಂದು ಪಿಎಸ್ಐ ಪುಂಡಲಿಕ್ ಪಟಾತರ ತಿಳಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 