ಕೊರೊನಾ ಟಾಸ್ಕ್ ಫೋರ್ಸ್ ಸಮಿತಿ ಸಭೆ
ಲೋಕದರ್ಶನವರದಿ
ಕಂಪ್ಲಿ:21 ತಾಲ್ಲೂಕಿನ ಸಣಾಪುರ ಗ್ರಾಮ ಪಂಚಾಯ್ತಿಯಲ್ಲಿ ಮಹಾಮಾರಿ ಕೊರೊನಾ ವೈರಸ್ ಟಾಸ್ಕ್ ಫೋಸರ್್ ಸಮಿತಿ ಸಭೆ ಶನಿವಾರ ನಡೆಯಿತು.
ಸಭೆಯಲ್ಲಿ ಅನೇಕ ಗ್ರಾಮಸ್ಥರು ಮಾತನಾಡಿ, ಮಹಾಮಾರಿಕೊರೊನಾ ವೈರಸ್ದಿಂದ ಲಾಕ್ ಡೌನ ಆಗಿದೆ ಸಣಾಪುರ 'ಗ್ರಾಮದಿಂದ ನಿತ್ಯ 15ಜನರು ತೋರಣಗಲ್ ಜಿಂದಾಲ್ ಕಾಖರ್ಾನೆಗೆ ನೌಕರಿಗೆ ಕೆಲಸಕ್ಕೆ ಹೋಗುತ್ತಿದ್ದಾರೆ ಆದರೆ,ಇತ್ತಿಚಿಗೆ ತೋರಣಗಲ್ ಪ್ರದೇಶದಲ್ಲಿ ಸುಮಾರು 31ಜನರಿಗೆ ಕೊರೊನಾ ವೈರಸ್ ಲಕ್ಷಣಗಳು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಜಿಂದಾಲ್ ಕಾಖರ್ಾನೆಗೆ ನೌಕರಿಗೆ ಕೆಲಸಕ್ಕೆ ನೌಕರಿಗೆ ತೆರಳದಂತೆ ಸೂಚಿಸಬೇಕು' ಎಂದು ಒತ್ತಾಯಿ ಸಿದರು.
ಸಣಾಪುರ ಪಿಡಿಒ ಶೇಷಗಿರಿ ಮಾತನಾಡಿ, 'ಗ್ರಾಮದಿಂದ ಜಿಂದಾಲ್ಗೆ ಹೋಗುತ್ತಿರುವ ನೌಕರರ ಮನೆ ಮನೆಗೆ ಹೋಗಿ ನೋಟಿಸ್ ನೀಡಲಾಗಿದೆ. ಇನ್ನು ಮುಂದೆ ನೌಕರಿಗೆ ಹೋದರೆ ಜಿಂದಾಲ್ ಅಲ್ಲಿಯೇ ವಾಸ್ತವ್ಯ ಹೂಡುವಂತೆಯೂ ತಿಳಿಸಲಾಗಿದೆ' ಎಂದರು 'ಕೊರೊನಾ ಹಿನ್ನೆಲೆಯಲ್ಲಿ ಗ್ರಾಮದ ಮುಖ್ಯ ರಸ್ತೆಯಲ್ಲಿದ್ದ ತಿಪ್ಪೆಗಳನ್ನು ತೆರವು ಮಾಡಲಾಗಿದೆ. ಚರಂಡಿ ಸ್ವಚ್ಛಗೊಳಿಸಿ ಬ್ಲಿಚಿಂಗ್ ಪೌಡರ್ ಸಿಂಪಡಣೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ನಿತ್ಯ ಕೊರೊನಾ ಜಾಗೃತಿ ಕುರಿತು ಪಂಚಾಯ್ತಿ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ' ಎಂದು ತಿಳಿಸಿದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಮ್ಮಿಗನೂರು ಮಹಾಂತೇಶ ಸಭೆ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯ್ತಿ ಸದಸ್ಯರು, ಟಾಸ್ಕ್ ಫೋಸರ್್ ಸಮಿತಿ ಸದಸ್ಯರು, ಅಂಗನವಾಡಿ, ಆಶಾ ಕಾರ್ಯಕತರ್ೆಯರು, ಆರೋಗ್ಯ, ಪೊಲೀಸ್ ಇಲಾಖೆ ಸಿಬ್ಬಂದಿ, ಕೊರೊನಾ ಸೈನಿಕರು, ಅನೇಕ ಗ್ರಾಮಸ್ಥರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 