ಕೊರೊನಾ ವಾರಿಯರ್ ಪೇದೆಗೂ ಸೋಂಕು
ಬೆಂಗಳೂರು, ಮೇ 22, ಕೊರೊನಾ ವಾರಿಯರ್ಸ್ ಗೂ ಕೊರೊನಾ ಬೆನ್ನಟ್ಟಿದ್ದು, ಇದೀಗ ನಗರ ಸಂಚಾರ ಠಾಣೆಯ ಪೊಲೀಸ್ ಕಾನ್ ಸ್ಟೆಬಲ್ ಓರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ರಾಮಕೃಷ್ಣ ಹೆಗಡೆ ನಗರದ ನಿವಾಸಿಯಾಗಿರುವ ಕಾನ್ಸ್ಟೆಬಲ್, ಠಾಣೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲದೇ, ಕೆಲ ಬಾರಿ ಫ್ರೇಜರ್ ಟೌನ್ ಭಾಗದಲ್ಲಿಯೂ ಕಾರ್ಯ ಕರ್ತವ್ಯ ನಿರ್ವಹಿಸಿದ್ದರು ಎಂದು ತಿಳಿದು ಬಂದಿದೆ. ಕೊರೊನಾ ಕರ್ತವ್ಯದಲ್ಲಿದ್ದ ಕಾನ್ ಸ್ಟೇಬಲ್ ಮುಂಜಾಗ್ರತಾ ಕ್ರಮವಾಗಿ ಕಳೆದ ಏಪ್ರಿಲ್ ತಿಂಗಳಿನಲ್ಲೇ ಅವರ ಕುಟುಂಬದವರನ್ನು ತಮ್ಮೂರಿಗೆ ಕಳುಹಿಸಿ, ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು.
ಇದೇ ತಿಂಗಳ 20ರಂದು ಪೇದೆ, ನಗರದ ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ಕೋವಿಡ್ -19 ವೈದ್ಯಕೀಯ ತಪಾಸಣೆಗೆ ಒಳಪಟ್ಟಿದ್ದು, ಗುರುವಾರ ರಾತ್ರಿ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.ಸದ್ಯ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಪೇದೆ ಅವರ ಜೊತೆಗೆ ಸಂಪರ್ಕದಲ್ಲಿದ್ದ ಕೆಲವರನ್ನು ಈಗಾಗಲೇ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಪೇದೆಗೆ ಕೊರೊನಾ ಸೋಂಕು ತಗುಲಿದ್ದರಿಂದ ಠಾಣೆಯನ್ನು ಸ್ಯಾನಿಟೈಸ್ ಮಾಡಲು ಹಾಗೂ ಅವರೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದವರ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ ಎಂದು ಸಂಚಾರ ವಿಭಾಗದ (ಪೂರ್ವ) ಡಿಸಿಪಿ ನಾರಾಯಣ ತಿಳಿಸಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 