ಹಸಿರು ವಲಯ ಚಾಮರಾಜನಗರದಲ್ಲೂ ಓರ್ವನಿಗೆ ಕೊರೋನಾ ಸೋಂಕು; ಜಿಲ್ಲಾಧಿಕಾರಿ ಮಾಹಿತಿ
ಚಾಮರಾಜನಗರ/ಬೆಂಗಳೂರು, ಜೂ 9,ರಾಜ್ಯದ ಏಕೈಕ ಹಸಿರು ವಲಯವಾಗಿ ಉಳಿದುಕೊಂಡಿದ್ದ ಚಾಮರಾಜನಗರಕ್ಕೆ ಮಹಾರಾಷ್ಟ್ರದ ಮುಂಬೈನಿಂದ ಆಗಮಿಸಿರುವ ವ್ಯಕ್ತಿಯೋರ್ವನಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.ಮುಂಬೈನಿಂದ ಸಂಬಂಧಿಕರ ಮನೆಗೆ ಆಗಮಿಸಿದ್ದ ವೈದ್ಯಕೀಯ ವಿದ್ಯಾರ್ಥಿಯಲ್ಲಿ ಸೋಂಕು ದೃಢಪಟ್ಟಿದೆ. ಅವರೊಂದಿಗೆ ಆಗಮಿಸಿದ ತಾಯಿ ಮತ್ತು ಸಹೋದರನ ಪರೀಕ್ಷಾ ವರದಿ ನೆಗೆಟೀವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮಾಹಿತಿ ನೀಡಿದ್ದಾರೆ.ಈ ಮೂವರು ಶುಕ್ರವಾರ ರೈಲಿನಲ್ಲಿ ಬೆಂಗಳೂರಿಗೆ ಆಗಮಿಸಿದ್ದು, ಅಲ್ಲಿಂದ ಕಾರಿನ ಮೂಲಕ ಹನೂರು ತಾಲ್ಲೂಕಿನ ಮಾರ್ಟಳ್ಳಿ ಪಾಲಿಮೇಡುವಿನಲ್ಲಿರುವ ಮನೆಗೆ ಬಂದಿದ್ದರು ಎಂದು ಅವರು ಮಾಹಿತಿ ನೀಡಿದರು.ಜಿಲ್ಲೆಯೊಳಗಿನ ಯಾರಿಗೂ ಸೋಂಕುತಗುಲಿಲ್ಲವಾದ್ದರಿಂದ ಜಿಲ್ಲೆಯನ್ನು ಹಸಿರು ವಲಯವೆಂದೇ ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 