ಬೆಂಗಳೂರಿನ 9 ಕಾರ್ಮಿಕರಿಗೆ ಕೊರೋನಾ ಸೋಂಕು, ಹೆಚ್ಚಿದ ಭೀತಿ, ಸೋಂಕಿತರರ ಸಂಖ್ಯೆ 443ಕ್ಕೇರಿಕೆ
ಬೆಂಗಳೂರು, ಏ 23,ಬೆಂಗಳೂರಿನ ಹೊಂಗಸಂದ್ರದ 9 ಕಾರ್ಮಿಕರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ.ನಗರದ 30, 30, 22, 40,30,25,37,43 ಹಾಗೂ 24 ವರ್ಷದ ವ್ಯಕ್ತಿಗಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇವರು ಕೊಳಚೆ ಪ್ರದೇಶದ ನಿವಾಸಿಗಳಾಗಿದ್ದು, ಇದರಿಂದ ಇನ್ನಷ್ಟು ಸೋಂಕು ಹರಡುವ ಭೀತಿ ಹೆಚ್ಚಾಗಿದೆ. ಇದರಿಂದ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 443ಕ್ಕೇರಿಕೆಯಾಗಿದೆ. 17 ಜನರು ಸೋಂಕಿನಿಂದ ಮೃತಪಟ್ಟಿದ್ದು, 141 ಜನರು ಗುಣಮುಖರಾಗಿದ್ದಾರೆ.ವಿಜಯಪುರದಲ್ಲಿ ಮತ್ತೆ ಎರಡು ಪ್ರಕರಣ ಪತ್ತೆಯಾಗಿದೆ. 32 ವರ್ಷದ ಪುರುಷ ಮತ್ತು 25 ವರ್ಷದ ಯುವತಿ, ಹುಬ್ಬಳ್ಳಿ, ಧಾರವಾಡದ 30 ವರ್ಷದ ಮಹಿಳೆ, 13 ವರ್ಷದ ಬಾಲಕಿಯಲ್ಲಿ ಸೋಂಕು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ 78 ವರ್ಷದ ವೃದ್ಧೆ, ಮಂಡ್ಯದ 47 ಹಾಗೂ 28 ವರ್ಷದ ಯುವತಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 