ಬಳ್ಳಾರಿಯಲ್ಲಿ ಕೊರೋನಾ ಅಟ್ಟಹಾಸ: ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆ - ತೀವ್ರ ಕಟ್ಟೆಚ್ಚರ
ಬಳ್ಳಾರಿ, ಏ 17,ಗಡಿ ನಾಡು ಬಳ್ಳಾರಿಯಲ್ಲಿ ಕೊರೋನಾ ವೈರಸ್ ಅಟ್ಟಹಾಸ ತೀವ್ರಗೊಂಡಿದ್ದು, ಗಣಿ ನಾಡನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬಳ್ಳಾರಿಯಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 6ರಲ್ಲೇ ನಿಯಂತ್ರಣದಲ್ಲಿತ್ತು. ಇಂದು ಒಂದೇ ಕುಟುಂಬದ ಏಳು ಜನರಲ್ಲಿ ಕೊರೋನಾ ಸೋಂಕು ಕಂಡು ಬಂದಿರುವುದು ತೀವ್ರ ಆತಂಕ ಮೂಡಿಸಿದೆ. ಹೀಗಾಗಿ ತೀವ್ರ ನಿಗಾ ವಹಿಸಲಾಗಿದೆ. ಹೊಸಪೇಟೆ ನಗರದ ಒಂದೇ ಕಟುಂಬದ ಏಳು ಜನರಲ್ಲಿ ಈ ಸೋಂಕು ಕಂಡು ಬಂದಿರುವುದರಿಂದ ಈಗ ಹೊಸಪೇಟೆ ನಗರ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದೆ.ಕಳೆದ ಎರಡು ವಾರಗಳಲ್ಲಿ ಜಿಲ್ಲೆಯಲ್ಲಿ ಹೊಸ ಪ್ರಕರಣಗಳು ವರದಿಯಾಗಿರಲಿಲ್ಲ. ಜತೆಗೆ ಲಾಕ್ಡೌನ್ ಸಮಯದಲ್ಲಿ ಜನತೆ ಮನೆಯಲ್ಲಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರು. ಸೋಂಕು ಹರಡಂದಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳಿಗೆ ಜನತೆ ಉತ್ತಮ ಸಹಕಾರ ನೀಡಿದ್ದರು. ಮಾರ್ಚ್ 30 ರಂದು ಹೊಸಪೇಟೆಯ ಎಸ್.ಆರ್. ನಗರದ ಗಂಡ ,ಹೆಂಡತಿ, ಮಗಳಿಗೆ ಕೊರೋನಾ ಸೋಂಕು ಪತ್ತೆಯಾಗಿತ್ತು. ಇವರು ಯಾರು ವಿದೇಶದಿಂದ ಬಂದವರ ಸಂಪರ್ಕದಲ್ಲಿದ್ದರು. ಇದೀಗ ಹೊಸದಾಗಿ ಸೋಂಕು ಪತ್ತೆಯಾದವರನ್ನು ಕ್ವಾರೆಂಟೇನ್ ನಲ್ಲಿಟ್ಟು ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ.
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ 