ಕೊರೊನಾ ಭೀತಿ ಹಿನ್ನೆಲೆ ರೈಲ್ವೆ ಟಿಕೆಟ್ ರದ್ದತಿಗೆ ಪೂರ್ತಿ ಹಣ ವಾಪಸ್: ಸರ್ಕಾರ
ನವದೆಹಲಿ, ಮಾ.19 ಕೊರೊನಾ ವೈರಸ್ ಭೀತಿ ಹಿನ್ನೆಲೆ ರೈಲು ಪ್ರಯಾಣಿಕರು ಟಿಕೆಟ್ ರದ್ದು ಪಡಿಸಿದರೆ, ಯಾವುದೇ ಶುಲ್ಕ ವಿಧಿಸದೆ ಪ್ರತಿಷತ ನೂರಕ್ಕೆ ನೂರುರಷ್ಟು ಹಣವನ್ನು ಹಿಂದಿರುಗಿಸುವ ಬಗ್ಗೆ ಗುರುವಾರ ಸರ್ಕಾರ ಪ್ರಕಟಿಸಿದೆ. ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯ ಶೂನ್ಯ ವೇಳೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. “ಈಗಾಗಲೇ ಸುತ್ತೋಲೆ ಹೊರಡಿಸಲಾಗಿದ್ದು, ರೈಲು ಟಿಕೆಟ್ ರದ್ದು ಮಾಡಿದ ಪ್ರಯಾಣಿಕರು ಪೂರ್ತಿ ಹಣವನ್ನು ವಾಪಸ್ ನೀಡುವುದಾಗಿ” ತಿಳಿಸಿದ್ದಾರೆ. ರೈಲ್ವೆ ಸಾರಿಗೆ ಇಲಾಖೆ ಈ ಕುರಿತ ಸಂಸದೀಯ ಸ್ಥಾಯಿ ಸಮಿತಿಗೆ ಮಾಹಿತಿ ನೀಡಿದೆ. ಕೊರೊನಾ ವೈರಸ್ ಭೀತಿಯಿಂದ ಬುಧವಾರ ಶೇಕಡಾ 63 ರಷ್ಟು ಟಿಕೆಟ್ ಗಳು ರದ್ದಾಗಿವೆ ಎಂದು ಪ್ರವಾಸೋದ್ಯ ಮತ್ತ ಸಂಸ್ಕೃತಿ ಇಲಾಖೆ ತಿಳಿಸಿದೆ. ಅವಶ್ಯಕತೆ ಇದ್ದರೆ ಮಾತ್ರ ಪ್ರಯಾಣಿಸಿ ಎಂದು ದೇಶದ ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೇಳಿಕೊಂಡಿದ್ದಾರೆ. ಅಲ್ಲದೆ ಕೋವಿಡ್-19 ಬಗ್ಗೆ ಸಂಸದರು ತಮ್ಮ ಅನಿಸಿಕೆಗಳನ್ನು ತಿಳಿಸಿದರು. ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಬಗ್ಗೆ ವಿಶೇಷವಾಗಿ ಗಮನ ಹರಿಸಲಾಯಿತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 