ಕರೋನ ಹಾವಳಿ: ದೇಶದಲ್ಲಿ ಈವರೆಗೆ 24 ಜನರ ಸಾವು
ನವದೆಹಲಿ,ಮಾ 29, ದೇಶದಲ್ಲಿ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು 975 ದಾಟಿದೆ , ಈವರೆಗೆ ಮಾರಕ ಸೋಂಕಿಗೆ 24 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ ದೇಶದಲ್ಲಿ ಶನಿವಾರ ಒಂದೇ ದಿನದಲ್ಲಿ 194 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರ, ಗುಜರಾತ್, ಕರ್ನಾಟಕ, ಮಧ್ಯಪ್ರದೇಶ, ತಮಿಳುನಾಡು, ಬಿಹಾರ, ಪಂಜಾಬ್, ದೆಹಲಿ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಕೇರಳ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಕರೊನ ಸೋಂಕಿನಿಂದ ಸಾವುಗಳು ಸಂಭವಿಸಿದೆ.ಆದರೆ ಕೇಂದ್ರ ಆರೋಗ್ಯ ಸಚಿವಾಲಯ ಮಾತ್ರ ಕರೋನ ದಿಂದ ಈವರೆಗೆ ದೇಶದಲ್ಲಿ 19 ಜನರ ಮಾತ್ರ ಮೃತಪಟ್ಟಿದ್ದಾರೆ ಎಂದು ಹೇಳಿದೆ .ಈವರೆಗೆ ಬಹುತೇಕ ಪ್ರಕರಣಗಳಲ್ಲಿ ವಿದೇಶದಿಂದ ಆಗಮಿಸಿದವರು ಹಾಗೂ ಅವರ ಜೊತೆ ಸಂಪರ್ಕಕ್ಕೆ ಬಂದವರಿಗೆ ಸೋಂಕು ತಗಲಿರುವುದು ವರದಿಯಾಗಿತ್ತು. ಆದರೆ ಸಮುದಾಯದೊಳಗೆ ಸೋಂಕು ಹರಡುವುದನ್ನು ಮೂರನೆ ಹಂತವೆಂದು ಪರಿಗಣಿಸಲಾಗುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 