ಕೊರೋನಾ ವೈರಸ್: ಭಾರತೀಯ ವೈದ್ಯಕೀಯ ಸಂಘದಿಂದ ಜನ ಜಾಗೃತಿ
ಬೆಂಗಳೂರು, ಮಾ 19, ರಾಜ್ಯದಲ್ಲಿ ಮಹಾಮಾರಿಯಾಗಿ ಪರಿಣಮಿಸಿರುವ ಕೊರೋನಾ ವೈರಸ್ ನಿಯಂತ್ರಣ ಕುರಿತ ಜನ ಜಾಗೃತಿ ಮೂಡಿಸಲು ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕ ಕಾರ್ಯ ಪ್ರವೃತ್ತವಾಗಿದೆ.ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಕೊರೋನಾ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ಭಾರತೀಯ ವೈದ್ಯಕೀಯ ಸಂಘ ಜನಜಾಗೃತಿ ಆರಂಭಿಸಿದೆ.
ಸಂಘದ ರಾಜ್ಯಾಧ್ಯಕ್ಷ ಡಾ.ಮಧುಸೂಧನ ಕಾರಿಗನೂರು ಈ ಕುರಿತು ಮಾಹಿತಿ ನೀಡಿ, " ನಮ್ಮ ಸಂಘದ 179 ಶಾಖೆಗಳ ಮೂಲಕ ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಕರಪತ್ರ, ಬ್ಯಾನರ್ ಹಂಚುವ ಜತೆಗೆ ವೈರಸ್ ನಿಂದಾಗುವ ಪರಿಣಾಮಗಳ ಬಗ್ಗೆ ಉಪನ್ಯಾಸ ನೀಡಲಾಗುತ್ತಿದೆ" ಎಂದರು.
ಕೆಮ್ಮು, ಜ್ವರ, ನೆಗಡಿ ಇರುವವರು ಆಸ್ಪತ್ರೆಗಳಿಗೆ ಬಂದರೆ ಪ್ರತ್ಯೇಕ ವಾರ್ಡಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ತಮಗೆ ಆಹ್ವಾನ ಸಂತೋಷದಿಂದ ತೆರಳುವುದಾಗಿ ಹೇಳಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 