ಕೊರೊನವೈರಸ್: ತಮಿಳುನಾಡಿನಲ್ಲಿ ಮೂರನೇ ಪ್ರಕರಣ ದೃಢ
ಚೆನ್ನೈ, ಮಾರ್ಚ್ 19, ತಮಿಳುನಾಡಿನಲ್ಲಿ ಮಾರಕ ಕೊರೊನವೈರಸ್ನ ಮೂರನೇ ಪ್ರಕರಣ ವರದಿಯಾಗಿದೆ ಎಂದು ಅಲ್ಲಿನ ಆರೋಗ್ಯ ಸಚಿವ ಡಾ. ಸಿ ವಿಜಯಬಾಸ್ಕರ್ ಇಂದು ದೃಢಪಡಿಸಿದ್ದಾರೆ.
ಸೋಂಕು ದೃಢಪಟ್ಟ ರೋಗಿ ಐರ್ಲೆಂಡ್ ರಾಜಧಾನಿ ಡಬ್ಲಿನ್ ನಿಂದ ಹಿಂತಿರುಗಿದ 21 ವರ್ಷದ ವಿದ್ಯಾರ್ಥಿಯಾಗಿದ್ದಾನೆ. ಮಾರ್ಚ್ 17 ರಂದು ಚೆನ್ನೈಗೆ ಆಗಮಿಸಿದ ವಿದ್ಯಾರ್ಥಿಯನ್ನು ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಿ, ಆತನ ಮನೆಯಲ್ಲಿ ಸಂಪರ್ಕ ತಡೆ ವಿಧಿಸಲಾಗಿತ್ತು. ಯುವಕ ರಾಜೀವ್ ಗಾಂಧಿ ಸರ್ಕಾರಿ ಸರ್ಕಾರಿ ಆಸ್ಪತ್ರೆಗೆ ಹಾಜರಾಗಿದ್ದ. ನಿನ್ನೆ ಪರೀಕ್ಷೆಗೆ ಕಳುಹಿಸಲಾಗಿದ್ದ ಆತನ ರಕ್ತ ಮಾದರಿ ಪರೀಕ್ಷೆಗಳಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಯುವಕನನ್ನು ಪ್ರತ್ಯೇಕ ವಾರ್ಡ್ನಲ್ಲಿ ಇರಿಸಲಾಗಿದ್ದು, ಆತನ ಆರೋಗ್ಯ ಸ್ಥಿರವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 