ಕೊರೋನಾ ವೈರಸ್ ಹಿನ್ನೆಲೆ: ಬಿ.ಟಿ.ಎಂ. ಬಡಾವಣೆ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಗತಿಕರಿಗೆ ಮೂರು ಹೊತ್ತು ಉಚಿತ ಊಟ ವಿತರಣೆ : ರಾಮಲಿಂಗಾ ರೆಡ್ಡಿ
ಬೆಂಗಳೂರು,
ಮಾ 31,ಕೊರೋನಾ ವೈರಸ್ ಸೋಂಕು ಭೀತಿ ಹಿನ್ನೆಲೆಯಲ್ಲಿ ಬಿ.ಟಿ.ಎಂ. ಬಡಾವಣೆ ವಿಧಾನಸಭಾ
ಕ್ಷೇತ್ರದಲ್ಲಿ ಬಡವರು, ಕೂಲಿ ಕಾರ್ಮಿಕರು ನಿರ್ಗತಿಕರಿಗೆ ಮಾಜಿ ಗೃಹ ಸಚಿವ ಶಾಸಕ
ರೆಡ್ಡಿ ದಿನದ ಮೂರು ಹೊತ್ತು ಊಟದ ವ್ಯವಸ್ಥೆ ಮಾಡಿದ್ದಾರೆ. ಬೆಳಿಗ್ಗೆ ತಿಂಡಿ,
ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ಬೆಳಗ್ಗೆ 8 ರಿಂದ 10
ಗಂಟೆವರೆಗೆ ಉಪಹಾರ, ಮಧ್ಯಾಹ್ನ 12 ರಿಂದ 2 ಗಂಟೆವರೆಗೆ ಮತ್ತು ಸಂಜೆ 7 ರಿಂದ ರಾತ್ರಿ 9
ಗಂಟೆವರೆಗೆ ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜತೆ
ಮಾತನಾಡಿದ ರಾಮಲಿಂಗಾರೆಡ್ಡಿ, ಬಿ..ಟಿ.ಎಂ. ಲೇ ಔಟ್ ಕ್ಷೇತ್ರದಲ್ಲಿ ಅಗತ್ಯವಿರುವವರಿಗೆ
ಕೊರೋನಾ ವೈರಸ್ ಸಮಸ್ಯೆ ಮುಗಿಯುವ ತನಕ ತಿಂಡಿ, ಊಟ ಪೂರೈಸಲಾಗುವುದು. ಪ್ರತಿದಿನ ಆರು
ಸಾವಿರಕ್ಕೂ ಹೆಚ್ಚು ಜನರಿಗೆ ಸ್ವಯಂ ಸೇವಕರ ಮೂಲಕ ಆಹಾರ ವಿತರಿಸಲಾಗುವುದು ಎಂದರು. ಏಪ್ರಿಲ್
14 ರವರೆಗೆ ಉಚಿತ ಊಟದ ವ್ಯವಸ್ಥೆ ಮಾಡಿದ್ದು, ಒಂದು ತಿಂಗಳು ಲಾಲ್ ಡೌನ್ ಆದರೂ ಸಹ
ನಿರಂತರವಾಗಿ ಅಹಾರ ಪೊಟ್ಟಣಗಳನ್ನು ಹಂಚಲಾಗುವುದು. ಲಕ್ಕಸಂದ್ರ ಮನೆಯಿಂದ ಉಚಿತ ಊಟದ
ವಾಹನಗಳು ಪ್ರತಿದಿನ ತೆರೆಳಲಿವೆ ಎಂದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 