ನಿಜಾಮುದ್ದೀನ್ ಮರ್ಕಝ್ನ ತಬ್ಲೀಗ್ ಜಮಾಅತ್ ಸಭೆಯಲ್ಲಿ ಪಾಲ್ಗೊಂಡಿದ್ದ 24 ಮಂದಿಯಲ್ಲಿ ಕೊರೋನಾ ವೈರಸ್ ದೃಢ
ನವದೆಹಲಿ,
ಮಾ.31,ರಾಷ್ಟ್ರ ರಾಜಧಾನಿ ನವದೆಹಲಿಯ ನಿಜಾಮುದ್ದೀನ್ ಮರ್ಕಝ್ನಲ್ಲಿ ನಡೆದ ಧಾರ್ಮಿಕ
ಸಭೆಯಲ್ಲಿ ಪಾಲ್ಗೊಂಡಿದ್ದ 24 ಮಂದಿಯಲ್ಲಿ ಕೋವಿಡ್ - 19 ಸೋಂಕು ದೃಢಪಟ್ಟಿದೆ ಎಂದು
ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಮಂಗಳವಾರ ತಿಳಿಸಿದ್ದಾರೆ.ಲಾಕ್ಡೌನ್ನ
ಹೊರತಾಗಿಯೂ ಧಾರ್ಮಿಕ ಸಭೆ ನಡೆಸಿರುವುದು ಗಂಭೀರ ಅಪರಾಧ. ಆರೋಪಿಗಳ ವಿರುದ್ಧ ಕಠಿಣ
ಕ್ರಮಕೈಗೊಳ್ಳುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ
ಶಿಫಾರಸು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.ಮರ್ಕಝ್ ಕಟ್ಟಡದಲ್ಲಿ 1500ರಿಂದ
1700 ಮಂದಿ ಸೇರಿದ್ದರು. 1033 ಮಂದಿಯನ್ನು ಸ್ಥಳಾಂತರಿಸಿದ್ದು, ಅವರಲ್ಲಿ 334
ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 700 ಮಂದಿಯನ್ನು
ಕ್ವಾರಂಟೈನ್ನಲ್ಲಿಡಲಾಗಿದೆ ಎಂದು ಸಚಿವರು ತಿಳಿಸಿದರು.ಆರು ಮಂದಿಯ ರಕ್ತದ
ಪರೀಕ್ಷೆಯಲ್ಲಿ ಕೊರೋನಾ ವೈರಸ್ ಪಾಸಿಟಿವ್ ಕಂಡುಬಂದ ಬಳಿಕ ಆಗ್ನೇಯ ದೆಹಲಿಯ
ನಿಜಾಮುದ್ದೀನ್ ಪ್ರದೇಶದ ತಬ್ಲೀಗ್ ಜಮಾಅತ್ ಮರ್ಕಝ್ನಿಂದ ಸುಮಾರು 200 ಮಂದಿಯನ್ನು
ಸೋಮವಾರ ಕೊರೋನಾ ವೈರಸ್ ಪರೀಕ್ಷೆಗಾಗಿ ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿತ್ತು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 