ಪರಿಷತ್ ಚುನಾವಣೆ: ಸಿದ್ದರಾಮಯ್ಯ - ದಿನೇಶ್ ಗುಂಡೂರಾವ್ ಗುಪ್ತ ಸಭೆ
ಬೆಂಗಳೂರು, ಫೆ.12, ವಿಧಾನ ಪರಿಷತ್ತಿನ ಪಕ್ಷೇತರ ಅಭ್ಯರ್ಥಿ ಅನಿಲ್ ಕುಮಾರ್ ಅವರಿಗೆ ಪಕ್ಷದಿಂದ ಬೆಂಬಲ ನೀಡುವ ಸಂಬಂಧ ವಿಪಕ್ಷ ಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗುಪ್ತ ಸಭೆ ನಡೆಸಿರುವ ಬಗ್ಗೆ ವರದಿಯಾಗಿದೆ.ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಮುಖ ನಾಯಕರ ಜತೆ ಸಭೆ ಬಳಿಕ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಪರಸ್ಪರ ಚರ್ಚೆ ನಡೆಸಿದ್ದಾರೆ.
ಪಕ್ಷೇತರ ಅಭ್ಯರ್ಥಿಗೆ ಬೆಂಬಲ ಕೊಡುವ ಬಗ್ಗೆ ತಮ್ಮನ್ನು ಸಂಪರ್ಕಿಸದೆ ತಮ್ಮ ಗಮನಕ್ಕೂ ತಾರದೆ ಕೇವಲ ಜೆಡಿಎಸ್ ನಾಯಕರು ಹಾಗೂ ಪಕ್ಷದ ಡಿ.ಕೆ.ಶಿವಕುಮಾರ್ ಜತೆ ಮಾತ್ರವೇ ಚರ್ಚೆ ಮಾಡಿದ್ದಾರೆಂದು ಪರಸ್ಪರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಜೊತೆ ಚರ್ಚಿಸದೇ ನಿರ್ಧಾರ ತೆಗೆದುಕೊಂಡಿರುವುದರಿಂದ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸುವುದು ಸರಿಯಲ್ಲ. ಒಂದು ವೇಳೆ ಬೆಂಬಲಿಸಿದರೆ ಮುಖಭಂಗ ಅನುಭವಿಸಬೇಕಾಗಿ ಬಂದು, ಅದು ಪಕ್ಷದ ಮೇಲೆ ಪರಿಣಾಮ ಬೀರಬಹುದೆಂದು ಎಂಬ ಚರ್ಚೆ ನಡೆದಿದೆ ಎನ್ನಲಾಗಿದೆ.ತಮಗೆ ಗೊತ್ತಿಲ್ಲದಂತೆಯೇ ಶಿವಕುಮಾರ್ ಅವರು ಎಚ್.ಡಿ.ಕುಮಾರಸ್ವಾಮಿ ಆಟ ಆಡಿದ್ದಾರೆಂದು ಕುಪಿತಗೊಂಡಿರುವ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್, ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡದಿದ್ದರೆ ಬಿಜೆಪಿಯ ಲಕ್ಷ್ಮಣ್ ಸವದಿಗೆ ಗೆಲುವು ಸುಲಭವಾಗಬಹುದು ಎನ್ನಲಾಗಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 