ದಂಪತಿ ಆತ್ಮಹತ್ಯೆ: ಹಣಕಾಸು ಸಮಸ್ಯೆ ಶಂಕೆ
ಬೆಂಗಳೂರು, ನ.15 : ಸಾಲದ ಸಮಸ್ಯೆಯಿಂದ ದಂಪತಿ ಶೌಚಾಲಯ ಸ್ವಚ್ಛಗೊಳಿಸುವ ಬ್ಲಿಚಿಂಗ್ ಆಸಿಡ್ ಕುಡಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.
ಮಂಜುನಾಥ ನಗರದ ಪುಷ್ಪಾಂಜಲಿ ಚಿತ್ರಮಂದಿರದ ಬಳಿ ವಾಸಿಸುತ್ತಿದ್ದ ಮೋಹನ್ (62) ಹಾಗೂ ಅವರ ಪತ್ನಿ ನಿರ್ಮಲಾ (50) ಆತ್ಮಹತ್ಯೆಗೆ ಶರಣಾದ ದಂಪತಿ.
ಬೆಮೆಲ್ನ ನಿವೃತ್ತ ನೌಕರರಾಗಿದ್ದ ಮೋಹನ್ ಮಂಜುನಾಥ ನಗರದಲ್ಲಿ ಎರಡು ಮನೆ ಕಟ್ಟಿದ್ದರು. ಒಂದು ಮನೆಯಲ್ಲಿ ಮೋಹನ್ ತನ್ನ ಪತ್ನಿಯೊಂದಿಗೆ ವಾಸಿಸುತ್ತಿದ್ದರೆ, ಮತ್ತೊಂದು ಮನೆಯಲ್ಲಿ ಮಗ ಹಾಗೂ ಸೊಸೆ ನೆಲೆಸಿದ್ದರು.
ನಿವೃತ್ತ ಜೀವನ ನಡೆಸುತ್ತಿದ್ದ ಮೋಹನ್, ಹಣಕಾಸಿನ ತೊಂದರೆಗೆ ಸಿಲುಕಿದ್ದರು. ಇದೇ ವಿಷಯದಲ್ಲಿ ಕೌಟುಂಬಿಕ ಕಲಹ ಉಂಟಾಗಿದೆ. ಇದರಿಂದ ನೊಂದ ಅವರು ಕಳೆದ ರಾತ್ರಿ ಪತ್ನಿ ನಿರ್ಮಲಾ ಜತೆ ಶೌಚಾಲಯ ಸ್ವಚ್ಛಗೊಳಿಸುವ ಆಸಿಡ್ ಕುಡಿದಿದ್ದಾರೆ. ರಕ್ತ ಕಾರಿಕೊಂಡು ಅಸ್ವಸ್ಥರಾಗಿ ಇಬ್ಬರು ಮೃತಪಟ್ಟಿದ್ದು, ಬೆಳಿಗ್ಗೆ ಮಗ ಬಾಗಿಲು ಬಡಿದಿದ್ದು, ಎಷ್ಟು ಬಾರಿ ಬಡಿದರೂ ತೆಗೆಯದಿದ್ದರಿಂದ ಆತಂಕಗೊಂಡು ಬಾಗಿಲು ಒಡೆದು ನೋಡಿದಾಗ ಇಬ್ಬರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ಮುನ್ನ ಮೋಹನ್ ಡೆತ್ನೋಟ್ ಬರೆದಿದ್ದು, ಹಣಕಾಸಿನ ತೊಂದರೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅದರಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಬಸವೇಶ್ವರ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಪುತ್ರ ಹಾಗೂ ಸೊಸೆಯ ಹೇಳಿಕೆಯನ್ನು ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 