ಕೋವಿಡ್-19: ನೆಮ್ಮದಿಯಲ್ಲಿ ಜವಾಬ್ದಾರಿಯಿಂದ ನುಣುಚಿಕೊಳ್ಳದಿರಿ- ಸಿ.ಸಿ.ಪಾಟೀಲ
ಗದಗ, ಮೇ 10, ಗದಗ ಜಿಲ್ಲೆಯ ಚಿಕಿತ್ಸೆಯಲ್ಲಿದ್ದ ಕೊವಿಡ್-19 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ನಮಗೆಲ್ಲ ಒಂದು ಹಂತದ ನೆಮ್ಮದಿ ನೀಡಿದೆ. ಆದರೆ ಕೊವಿಡ್-19 ಸೋಂಕು ತಡೆ ಕುರಿತ ಜಿಲ್ಲೆಯ ಸಾರ್ವಜನಿಕರು, ಯುವಜನರ ಮತ್ತು ಅಧಿಕಾರಿ ಸಿಬ್ಬಂದಿಯಾದಿಯಾಗಿ ಸರ್ವರೂ ಹೆಚ್ಚಿನ ಜವಾಬ್ದಾರಿಯಿಂದ ಜೀವನವನ್ನು ನಡೆಸಬೇಕಾದ ಕುರಿತು ರಾಜ್ಯದ ಗಣಿ ಭೂವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಎಚ್ಚರಿಕೆಯ ಮನವಿ ಮಾಡಿದ್ದಾರೆ. ಕೊವಿಡ್-19 ಸೋಂಕಿನ ತಡೆ ಮತ್ತು ನಿಯಂತ್ರಣ ಕುರಿತು ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಅನವಶ್ಯಕ ಓಡಾಟ, ಪ್ರಯಾಣ ನಿಲ್ಲಿಸುವ, ಮುಖಕ್ಕೆ ಮಾಸ್ಕ, ಸ್ಯಾನಿಟೈಜರ್ ಉಪಯೋಗ , ಆಗಾಗ ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳುವದು ನಮ್ಮ ನಿತ್ಯದ ಅಭ್ಯಾಸವಾಗಬೇಕು. ಎಲ್ಲರೂ ಈ ಮುಂಜಾಗ್ರತಾ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಿದಲ್ಲಿ ಮಾತ್ರ ಕೊವಿಡ್-19 ಸೋಂಕನ್ನು ಯಶಸ್ವಿಯಾಗಿ ತಡೆಗಟ್ಟಬಹುದು, ಕೊವಿಡ್-19 ಈಗ ದೇಶದ ಸರ್ಕಾರದ ಸಮಸ್ಯೆ ಮಾತ್ರವಲ್ಲ ಪ್ರತಿ ವ್ಯಕ್ತಿ, ಕುಟುಂಬ, ಸಮಾಜಗಳ ಅಳಿವು ಉಳಿವಿನ ಪ್ರಶ್ನೆ ಎಂಬುದನ್ನು ನಾವು ಅರಿತುಕೊಂಡು ತಪ್ಪದೇ ವೈಯಕ್ತಿಕ, ಸಾಮಾಜಿಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಸಚಿವ ಸಿ.ಸಿ.ಪಾಟೀಲ ಮನವಿ ಮಾಡಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 