ಕೋವಿಡ್-19: ನೆಮ್ಮದಿಯಲ್ಲಿ ಜವಾಬ್ದಾರಿಯಿಂದ ನುಣುಚಿಕೊಳ್ಳದಿರಿ- ಸಿ.ಸಿ.ಪಾಟೀಲ
ಗದಗ, ಮೇ 10, ಗದಗ ಜಿಲ್ಲೆಯ ಚಿಕಿತ್ಸೆಯಲ್ಲಿದ್ದ ಕೊವಿಡ್-19 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ನಮಗೆಲ್ಲ ಒಂದು ಹಂತದ ನೆಮ್ಮದಿ ನೀಡಿದೆ. ಆದರೆ ಕೊವಿಡ್-19 ಸೋಂಕು ತಡೆ ಕುರಿತ ಜಿಲ್ಲೆಯ ಸಾರ್ವಜನಿಕರು, ಯುವಜನರ ಮತ್ತು ಅಧಿಕಾರಿ ಸಿಬ್ಬಂದಿಯಾದಿಯಾಗಿ ಸರ್ವರೂ ಹೆಚ್ಚಿನ ಜವಾಬ್ದಾರಿಯಿಂದ ಜೀವನವನ್ನು ನಡೆಸಬೇಕಾದ ಕುರಿತು ರಾಜ್ಯದ ಗಣಿ ಭೂವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಎಚ್ಚರಿಕೆಯ ಮನವಿ ಮಾಡಿದ್ದಾರೆ. ಕೊವಿಡ್-19 ಸೋಂಕಿನ ತಡೆ ಮತ್ತು ನಿಯಂತ್ರಣ ಕುರಿತು ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಅನವಶ್ಯಕ ಓಡಾಟ, ಪ್ರಯಾಣ ನಿಲ್ಲಿಸುವ, ಮುಖಕ್ಕೆ ಮಾಸ್ಕ, ಸ್ಯಾನಿಟೈಜರ್ ಉಪಯೋಗ , ಆಗಾಗ ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳುವದು ನಮ್ಮ ನಿತ್ಯದ ಅಭ್ಯಾಸವಾಗಬೇಕು. ಎಲ್ಲರೂ ಈ ಮುಂಜಾಗ್ರತಾ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಿದಲ್ಲಿ ಮಾತ್ರ ಕೊವಿಡ್-19 ಸೋಂಕನ್ನು ಯಶಸ್ವಿಯಾಗಿ ತಡೆಗಟ್ಟಬಹುದು, ಕೊವಿಡ್-19 ಈಗ ದೇಶದ ಸರ್ಕಾರದ ಸಮಸ್ಯೆ ಮಾತ್ರವಲ್ಲ ಪ್ರತಿ ವ್ಯಕ್ತಿ, ಕುಟುಂಬ, ಸಮಾಜಗಳ ಅಳಿವು ಉಳಿವಿನ ಪ್ರಶ್ನೆ ಎಂಬುದನ್ನು ನಾವು ಅರಿತುಕೊಂಡು ತಪ್ಪದೇ ವೈಯಕ್ತಿಕ, ಸಾಮಾಜಿಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಸಚಿವ ಸಿ.ಸಿ.ಪಾಟೀಲ ಮನವಿ ಮಾಡಿದ್ದಾರೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 