ಕೋವಿಡ್ 19 ಸೋಂಕು ಹಿನ್ನೆಲೆ: ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ನಿಂದ ವಿನಾಯಿತಿ
ನವದೆಹಲಿ, ಮೇ 19, ಮೇ ೩೧ರವರೆಗೆ ಲಾಕ್ಡೌನ್ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಕಚೇರಿ ಹಾಜರಾತಿಗೆ ಬಯೋಮೆಟ್ರಿಕ್ ಬಳಕೆಯನ್ನು ಮುಂದಿನ ಆದೇಶದವರೆಗೆ ಅಮಾನತ್ತಿಡಲಾಗಿದೆ. ಕೇಂದ್ರ ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದುಕೊರತೆ ಸಚಿವಾಲಯ ಈ ವಿಷಯ ತಿಳಿಸಿದ್ದು, ಕೋವಿಡ್ 19 ಸೋಂಕು ನಿಯಂತ್ರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದು, ಸಿಬ್ಬಂದಿಯ ಹಾಜರಾತಿಯನ್ನು ಉಪಕಾರ್ಯದರ್ಶಿ ಮಟ್ಟದ ಅಧಿಕಾರಿಗಳು ದಾಖಲಾತಿಯನ್ನು ಪರಿಶೀಲಿಸಬೇಕು. ದಿನಬಿಟ್ಟು ದಿನ ಶೇಕಡ ೫೦ರಷ್ಟು ಸಿಬ್ಬಂದಿ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಹಾಜರಾತಿ ಅಗತ್ಯವಿಲ್ಲದ ಅಧಿಕಾರಿಗಳು ಮನೆಯಿಂದಲೇ ದೂರ ಸಂಪರ್ಕ ವ್ಯವಸ್ಥೆ ಮೂಲಕ ಕಚೇರಿ ಆಡಳಿತ ವ್ಯವಸ್ಥೆಯನ್ನು ನೋಡಿಕೊಳ್ಳುವಂತೆ ಸೂಚಿಸಲಾಗಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 