ಕೋವಿಡ್ -19 ಕಾಯಿಲೆ ಬಗ್ಗೆ ಜಾಗೃತರಾಗಿರುವುದು ಅತ್ಯಗತ್ಯ - ನ್ಯಾಯಾಧೀಶೆ ವಿಪುಲಾ ಪೂಜಾರ
Covid awerness at dist court
ಕೋವಿಡ್ -19 ಕಾಯಿಲೆ ಬಗ್ಗೆ ಜಾಗೃತರಾಗಿರುವುದು ಅತ್ಯಗತ್ಯ -
ನ್ಯಾಯಾಧೀಶೆ ವಿಪುಲಾ ಪೂಜಾರ
ಕಾರವಾರ : ಕೊರೋನಾ ವೈರಸ್ ಯಾರಿಗೂ ಕಾಣದ ವೈರಸ್ ಆಗಿದ್ದು , ಇದರ ಹರಡುವಿಕೆ ನಿಯಂತ್ರಣಕ್ಕೆ ಬರಬೇಕಿದೆ. ಕಾರಣ ಈ ಬಗ್ಗೆ ಎಲ್ಲರೂ ಸದಾ ಜಾಗೃತರಾಗಿರುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ವಿಪುಲಾ ಎಂ.ಬಿ.ಪೂಜಾರ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಶನಿವಾರ ಕೋವಿಡ್ - 19 ಜಾಗೃತಿ ಜನಾಂದೋಲನ ಅಭಿಯಾನಕ್ಕೆ ಚಾಲನೆ ನೀಡಿ, ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.
ಮಾರಣಾಂತಿಕ ವೈರಾಣು ಹರಡುವುದನ್ನು ತಡೆಯಲು ಅಗತ್ಯವಾದ ಎಲ್ಲಾ ಎಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಮತ್ತು ಕೋವಿಡ್ ಹರಡದಿರಲು ಸೂಕ್ತ ಕ್ರಮಗಳನ್ನು ಅನುಸರಿಸಬೇಕು ಮತ್ತು ಬೇರೆಯವರು ಕೂಡ ಅದನ್ನು ಅನುಸರಿಸುವಂತೆ
ತಿಳಿ ಹೇಳಬೇಕು.
ಸಾರ್ವಜನಿಕರೊಡನೆ ಬೆರೆಯುವಾಗ ಮುಖಕವಚ ಧರಿಸುವುದು, ಕನಿಷ್ಠ 6 ಅಡಿ ಅಂತರ ಕಾಪಾಡಿಕೊಳ್ಳುವುದು ಮತ್ತು ಆಗಾಗ ಕೈಗಳನ್ನು ತೊಳೆಯುವಂತಹ ರೂಢಿ ಮಾಡಿಕೊಳ್ಳಬೇಕೆಂದರು.
ಜಾಗೃತಿ ಜಾಥ:
ಜಾಗೃತಿ ಜಾಥಾವು ನ್ಯಾಯಾಲಯದ ಆವರಣದಿಂದ ಹೊರಟು ಸುಭಾಸ್ ಸರ್ಕಲ್, ಸವಿತಾ ಹೊಟೇಲ್, ಡಿಎಚ್ಒ ಕಚೇರಿ, ಪಿಕಳೆ ರೋಡ್, ಜಿಲ್ಲಾಧಿಕಾರಿ ಕಚೇರಿ ರಸ್ತೆ ಮೂಲಕ ಸಾಗಿ , ಪುನಃ ಕೋರ್ಟ ಆವರಣಕ್ಕೆ ಬಂದು ಮುಕ್ತಾಯಗೊಂಡಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ.ಗೋವಿಂದಯ್ಯ, ಜಿಲ್ಲಾ ವಕೀಲ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಪ್ಯಾನಲ್ ವಕೀಲರು ಮತ್ತು ಅರೆಕಾಲಿಕ ಸ್ವಯಂಸೇವಕರು ಸೇರಿದಂತೆ ಇತರರು ಹಾಜರಿದ್ದರು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 