ಉತ್ತರ ಕನ್ನಡದಲ್ಲಿ ಕೊವಿಡ್ ಪೀಡಿತರ ಸಂಖ್ಯೆ ಇಳಿಮುಖ
ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಇಳಿಮುಖ:
72 ಜನ ಗುಣಮುಖ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಮುಖ ಕಂಡು ಬಂದಿದೆ. ರವಿವಾರ 26 ಕೋವಿಡ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಹಾಗೆಯೇ 72 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸೋಂಕಿತ ಪ್ರಕರಣಗಳು : ಕಾರವಾರದಲ್ಲಿ 6 ಜನರಿಗೆ, ಅಂಕೋಲಾದಲ್ಲಿ 4, ಯಲ್ಲಾಪುರ, ಮುಂಡಗೋಡದಲ್ಲಿ ತಲಾ 5 ಜನರಿಗೆ , ಭಟ್ಕಳದಲ್ಲಿ 4, ಸಿದ್ದಾಪುರದಲ್ಲಿ 1, ಹಳಿಯಾಳದಲ್ಲಿ ಓರ್ವನಲ್ಲಿ ಸೋಂಕು ದೃಢಪಟ್ಟಿದೆ.
ಗುಣಮುಖ :
ಕಾರವಾರದಲ್ಲಿ 9, ಕುಮಟಾ, ಹೊನ್ನಾವರ, ಭಟ್ಕಳ, ಯಲ್ಲಾಪುರದಲ್ಲಿ ತಲಾ ಒಂದು, ಶಿರಸಿಯಲ್ಲಿ 16, ಹಳಿಯಾಳದಲ್ಲಿ 43 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಈತನಕ ಜಿಲ್ಲೆಯ 2,196 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 1,490 ಮಂದಿ ಗುಣಮುಖರಾಗಿದ್ದಾರೆ. 24 ಮಂದಿ ಸಾವನ್ನಪ್ಪಿದ್ದು, 682 ಸಕ್ರಿಯ ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. 90 ಜನ ಸೋಂಕಿತರು ಹೋಮ್ ಐಸೋಲೆಶನ್ ನಲ್ಲಿದ್ದಾರೆ.
.....
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 