ರಾಜ್ಯದಲ್ಲಿ 4 ಲಕ್ಷ ಜನರ ಕೋವಿಡ್ ಪರೀಕ್ಷೆ: ಡಾ.ಕೆ.ಸುಧಾಕರ್
ಬೆಂಗಳೂರು, ಜೂ.10 ರಾಜ್ಯದಲ್ಲಿ ಇದುವರೆಗೆ 4 ಲಕ್ಷ ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದ ಚೇತರಿಕೆಯ ಪ್ರಮಾಣ ಶೇಕಡಾ 44ರಷ್ಟಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಕರ್ನಾಟಕ ರಾಜ್ಯ ಮಂಗಳವಾರ 4 ಲಕ್ಷ ಕೋವಿಡ್ ಪರೀಕ್ಷೆಯ ಗಡಿ ದಾಟಿದೆ. ಇಲ್ಲಿಯವರೆಗೆ, ನಾವು ರಾಜ್ಯಾದ್ಯಂತ 71 ಕೊರೋನಾ ಪರೀಕ್ಷಾ ಪ್ರಯೋಗಾಲಯಗಳಲ್ಲಿ 4,00,257 ಮಾದರಿಗಳನ್ನು ಪರೀಕ್ಷೆ ನಡೆಸಿದ್ದೇವೆ. ಅದರಲ್ಲಿ ಶೇ. 1.4ರಷ್ಟು ಪಾಸಿಟಿವ್ ದರ ದಾಖಲಾಗಿದೆ. 2605 ಡಿಸ್ಚಾರ್ಜ್ ಮತ್ತು 5921 ಒಟ್ಟು ಸೋಂಕಿನ ಪ್ರಕರಣಗಳೊಂದಿಗೆ, ಕರ್ನಾಟಕದ ಚೇತರಿಕೆ ಪ್ರಮಾಣವು ಆರೋಗ್ಯಕರವಾದ ಶೇ. 44ರಷ್ಟರಲ್ಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 