ಯಡೋಗಾ ರಸ್ತೆ ಬದಿಯಲ್ಲಿ ಅಳವಡಿಸಿದ ಪೈಪುಗಳಲ್ಲಿ ಬಿರುಕು ಬಿಟ್ಟ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿ
Cracks in pipes installed on Yadoga Road disrupt vehicular traffic
ಲೋಕದರ್ಶನ ವರದಿ
ದಾಂಡೇಲಿ 22 : ದಾಂಡೇಲಿಯ ಕಾಳಿನದಿಯಿಂದ ಬೃಹತ್ ಪೈಪುಗಳ ಮೂಲಕ ನೀರು ಹರಿಸಿ ಕೆರೆ-ಬಾಂದಾರಗಳನ್ನು ತುಂಬಿಸುವ ಕಾಮಗಾರಿ ಮುಕ್ತಾಯ ಹಂತ ತಲುಪಿದ ಸಂದರ್ಭದಲ್ಲಿ, ಪರೀಶೀಲನಾ ಹಂತದಲ್ಲೇ ಪೈಪುಗಳ ಒಡೆತದಿಂದ ನೀರು ಕಾರಂಜಿಯಂತೆ ಚಿಮ್ಮಿ ರಸ್ತೆ ತುಂಬ ಹರಿದ ಘಟನೆ ರೈತರಲ್ಲಿ ಆತಂಕ ಹುಟ್ಟಿಸಿದೆ. ಯಡೋಗಾ ರಸ್ತೆ ಬದಿಯಲ್ಲಿ ಅಳವಡಿಸಿದ ಪೈಪುಗಳಲ್ಲಿ ಬಿರುಕು ಬಿಟ್ಟ ಪರಿಣಾಮ ನೀರು ಭಾರೀ ಒತ್ತಡದಿಂದ ಹೊರಚಿಮ್ಮಿ ರಸ್ತೆ ಮೇಲೆ ಧಾರಾಕಾರವಾಗಿ ಹರಿದಿದ್ದು, ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಸ್ಥಳೀಯರು ತಕ್ಷಣವೆ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ ತಾತ್ಕಾಲಿಕವಾಗಿ ನೀರಿನ ಹರಿವನ್ನು ನಿಯಂತ್ರಿಸುವ ಕ್ರಮ ಕೈಗೊಳ್ಳಲಾಯಿತು.
ಇದೇ ಯೋಜನೆ ವಿಳಂಬವಾಗುತ್ತಿರುವದನ್ನು ಖಂಡಿಸಿ ಇತ್ತಿಚೆಗೆ ರೈತರು ಪಾದಯಾತ್ರೆ ನಡೆಸಿ ಹಳಿಯಾಳ ಬಂದ್ ಕರೆ ನೀಡಿ ತೀವ್ರ ಆಕ್ರೋಷ ವ್ಯಕ್ತ ಪಡಿಸಿದ್ದರು. ನೀರಾವರಿ ಸೌಲಭ್ಯಕ್ಕಾಗಿ ವರ್ಷಗಳಿಂದ ಕಾಯುತ್ತಿರುವ ರೈತರಿಗೆ ಈ ಯೋಜನೆ ಭರವಸೆಯ ಕಿರಣವಾಗಿದ್ದು, ಈದೀಗ ತಾಂತ್ರಿಕ ದೋಷಗಳು ಬೆಳಕಿಗೆ ಬರುತ್ತಿರುವದು ಮತ್ತಷ್ಟು ನಿರಾಸೆ ಮೂಡಿಸಿದೆ. ದೀಗ ಯೋಜನೆ ಶೀಘ್ರ ಪಾರಂಭಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿರುವ ನಡುವೆಯೆ ಈ ಘಟನೆ ನಡೆದಿರುವದು ಹಲವು ಪ್ರಶ್ನೆಗಳನ್ನು ಎಬ್ಬಿಸಿದೆ. ರೈತರ ಬಹುಕಾಲದ ಕನಸು ನನಸಾಗುವದೇ ಅಥವಾ ಇನ್ನಷ್ಟು ಸಮಸ್ಯೆಗಳು ಎದುರಾಗುವದೇ ಎಂಬ ಆತಂಕ ಈ ಪ್ರದೇಶದಲ್ಲಿ ವ್ಯಕ್ತವಾಗುತ್ತಿದೆ. ಕೂಡಲೇ ಯೋಜನೆಯ ಅಡೆತಡೆಗಳನ್ನು ನಿವಾರಿಸಿ ಕೆರೆ ಬಾಂದಾರಗಳನ್ನು ತುಂಬಿಸಿ ನೀರಾವರಿಗೆ ಅನುಕೂಲಮಾಡಿ ಕೊಡುವಂತೆ ರೈತರು ಆಗ್ರಹಿಸಿದ್ದಾರೆ.
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ಮಗನಿಗಾಗಿ 2ನೇ ದಿನವು ಮುಂದುವರಿದ ಶೋಧ ಕಾರ್ಯ: ಕುಟುಂಬಕ್ಕಿದ್ದ ಒಬ್ಬನೆ ಮಗು ನೀರುಪಾಲು
ಅಕ್ರಮ ಚಟುವಟಿಕೆಗಲ್ಲಿ ಭಾಗಿ : ಇಬ್ಬರು ಆರೋಪಿತರು ಬೆಳಗಾವಿ ಜಿಲ್ಲೆಯಿಂದ ಗಡಿಪಾರು 