ವ್ಯಕ್ತಿಯೊರ್ವನಿಗೆ ಚಾಕು ಇರಿದು, ಮೈಮೇಲೆ ಪೆಟ್ರೋಲ್ ಸುರಿದು ಕೊಲೆ
Crime News-Jamakhandi
ಲೋಕದರ್ಶನ ವರದಿ
ಜಮಖಂಡಿ 21: ತಾಲ್ಲೂಕಿನ ಕನ್ನೊಳಿ ಗ್ರಾಮದ ಬಸ್ ನಿಲ್ದಾಣದ ನಡುರಸ್ತೆಯಲ್ಲಿ ವ್ಯಕ್ತಿಯೊರ್ವನಿಗೆ ಚಾಕುವಿನಿಂದ ಇರಿದು. ಮೈಮೇಲೆ ಪೆಟ್ರೋಲ್ ಸುರಿದು ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ.
ಕೊಲೆಯಾದ ವ್ಯಕ್ತಿ ಸೋಮಲಿಂಗ ಪಡಸಲಗಿ (36) ಸ್ವೀಪ್ಟ್ ಡಿಜೆರ್ ಹೊಸ ಕಾರು ತೆಗೆದುಕೊಂಡು ಪೂಜೆ ಮುಗಿಸಿ. ಮರಳಿ ಕನ್ನೋಳಿ ಗ್ರಾಮದ ಬಸ್ ನಿಲ್ದಾಣದ ನಡುರಸ್ತೆಯಲ್ಲಿ ನಿಂತುಕೊಂಡ ಸಮಯದಲ್ಲಿ ಆರೋಪಿಗಳಾದ ಸದಾಶಿವ ಪಡಸಲಗಿ ಹಾಗೂ ರವಿ ಪಾಟೀಲ ಮತ್ತು ನಾವಿ ಎಂಬ ಮೂವರು ಸೇರಿಕೊಂಡು ಸೋಮಲಿಂಗ ಪಡಸಲಗಿ ಆತನಿಗೆ ಚಾಕುವಿನಿಂದ ಇರಿದು. ನಂತರ ಪೆಟ್ರೋಲ್ ಮೈಮೇಲೆ ಸುರಿದು ಹಾಗೂ ಸ್ವೀಪ್ ಡಿಜೇರ್ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಯನ್ನು ಮಾಡಲಾಗಿದೆ.
ಕೊಲೆಯಾದ ವ್ಯಕ್ತಿಯ ಸೋಮಲಿಂಗ ಪಡಸಲಗಿ ಇತನು ಕೊಲೆಗೈದ ಆರೋಪಿ ಹೆಂಡತಿಯ ಜೊತೆ ಅನೈತಿಕ ಸಂಬಂಧ ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಹಳೆಯ ವೈಷಮ್ಯ ಕಾರಣದಿಂದ ಕೊಲೆ ನಡೆದಿದ್ದು. ಕೊಲೆ ನಡೆದ ಸ್ಥಳದಲ್ಲಿಯೇ ಮೂವರು ಆರೋಪಗಳನ್ನು ವಶಕ್ಕೆ ಪಡೆಯಲಾಗಿದ್ದು. ಘಟನಾ ಸ್ಥಳಕ್ಕೆ ಬಾಗಲಕೋಟ ಜಿಲ್ಲಾ ಎಸ್.ಪಿ.ಸಿದ್ದಾರ್ಥ ಗೋಯಲ್ ಭೇಟಿ ನೀಡಿ ಮಾಹಿತಿಯನ್ನು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಡಿಎಸ್ಪಿ. ಸೈಯದ್ ರೋಷನ್ ಜಮೀರ, ಸಿಪಿಐ ಮಲ್ಲಪ್ಪ ಮಡ್ಡಿ, ಸಾವಳಗಿ ಪಿಎಸ್ಐ. ಅಪ್ಪಣ್ಣ ಐಗಳಿ, ಜಮಖಂಡಿ ಪಿಎಸ್ಐ ಅನೀಲ ಕುಂಬಾರ ತಂಡ ಸೇರಿದಂತೆ ತನಿಖೆಯನ್ನು ಮುಂದುವರಿಸಿದ್ದಾರೆ.

ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 