ಅಕ್ರಮವಾಗಿ ಜಿಲ್ಲೆ ಪ್ರವೇಶಿಸಿದರೇ ಕ್ರಿಮಿನಲ್ ಮೊಕದ್ದಮೆ: ಡಾ.ಬೊಮ್ಮನಹಳ್ಳಿ ಎಚ್ಚರಿಕೆ
ಬೆಳಗಾವಿ, ಮೇ14,ಕೇಂದ್ರ ಸರ್ಕಾರ ಆರಂಭಿಸಿರುವ 'ಸೇವಾಸಿಂಧು' ಆ್ಯಪ್ ಮೂಲಕ ಇ-ಪಾಸ್ ಪಡೆಯದೇ ನೆರೆ ರಾಜ್ಯಗಳಿಂದ ಕಾನೂನುಬಾಹಿರವಾಗಿ ಜಿಲ್ಲೆ ಪ್ರವೇಶಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ.ಸರ್ಕಾರದ ಮಾರ್ಗಸೂಚಿ ಅನುಸರಿಸದೇ ಕೆಲವರು ಅಡ್ಡದಾರಿಯಿಂದ ಜಿಲ್ಲೆಗೆ ಪ್ರವೇಶಿಸುತ್ತಿರುವುದು ಕಂಡುಬಂದಿದೆ.ಈ ರೀತಿಯ ಅಕ್ರಮವಾಗಿ ರಾಜ್ಯ ಪ್ರವೇಶಿಸುವುದು ಕಾನೂನು ಬಾಹಿರವಾಗಿದ್ದು, ಅಂತಹವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಸೇವಾಸಿಂಧು ಮೂಲಕ ಇ-ಪಾಸ್ ಪಡೆಯದೇ ಮಹಾರಾಷ್ಟ್ರ ಸೇರಿ ಇತರೆ ನೆರೆ ರಾಜ್ಯಗಳ ಮೂಲಕ ಯಾರಾದರೂ ಬೆಳಗಾವಿ ಜಿಲ್ಲೆ ಪ್ರವೇಶಿಸಿದ್ದರೆ ಅಂತಹವರು ಸ್ವಯಂಪ್ರೇರಣೆಯಿಂದ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ, ಪರೀಕ್ಷೆಗೆ ಒಳಪಡಬೇಕು. ಜತೆಗೆ, ಸಂಬಂಧಿಸಿದ ಪೊಲೀಸ್ ಠಾಣೆಗೂ ಮಾಹಿತಿ ನೀಡಬೇಕು. ಒಂದು ವೇಳೆ ಅಕ್ರಮ ಪ್ರವೇಶದ ವಿಷಯ ಮುಚ್ಚಿಟ್ಟಿರುವುದು ತಿಳಿದುಬಂದರೆ ಅಂತಹವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ಇಂತಹವರ ವಿರುದ್ಧ ಸಾರ್ವಜನಿಕರು ಕೂಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಮ್ ಸಂಖ್ಯೆ 0831-2407290 ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿನು ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 