ಅಕ್ರಮವಾಗಿ ಜಿಲ್ಲೆ ಪ್ರವೇಶಿಸಿದರೇ ಕ್ರಿಮಿನಲ್ ಮೊಕದ್ದಮೆ: ಡಾ.ಬೊಮ್ಮನಹಳ್ಳಿ ಎಚ್ಚರಿಕೆ
ಬೆಳಗಾವಿ, ಮೇ14,ಕೇಂದ್ರ ಸರ್ಕಾರ ಆರಂಭಿಸಿರುವ 'ಸೇವಾಸಿಂಧು' ಆ್ಯಪ್ ಮೂಲಕ ಇ-ಪಾಸ್ ಪಡೆಯದೇ ನೆರೆ ರಾಜ್ಯಗಳಿಂದ ಕಾನೂನುಬಾಹಿರವಾಗಿ ಜಿಲ್ಲೆ ಪ್ರವೇಶಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ.ಸರ್ಕಾರದ ಮಾರ್ಗಸೂಚಿ ಅನುಸರಿಸದೇ ಕೆಲವರು ಅಡ್ಡದಾರಿಯಿಂದ ಜಿಲ್ಲೆಗೆ ಪ್ರವೇಶಿಸುತ್ತಿರುವುದು ಕಂಡುಬಂದಿದೆ.ಈ ರೀತಿಯ ಅಕ್ರಮವಾಗಿ ರಾಜ್ಯ ಪ್ರವೇಶಿಸುವುದು ಕಾನೂನು ಬಾಹಿರವಾಗಿದ್ದು, ಅಂತಹವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಸೇವಾಸಿಂಧು ಮೂಲಕ ಇ-ಪಾಸ್ ಪಡೆಯದೇ ಮಹಾರಾಷ್ಟ್ರ ಸೇರಿ ಇತರೆ ನೆರೆ ರಾಜ್ಯಗಳ ಮೂಲಕ ಯಾರಾದರೂ ಬೆಳಗಾವಿ ಜಿಲ್ಲೆ ಪ್ರವೇಶಿಸಿದ್ದರೆ ಅಂತಹವರು ಸ್ವಯಂಪ್ರೇರಣೆಯಿಂದ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ, ಪರೀಕ್ಷೆಗೆ ಒಳಪಡಬೇಕು. ಜತೆಗೆ, ಸಂಬಂಧಿಸಿದ ಪೊಲೀಸ್ ಠಾಣೆಗೂ ಮಾಹಿತಿ ನೀಡಬೇಕು. ಒಂದು ವೇಳೆ ಅಕ್ರಮ ಪ್ರವೇಶದ ವಿಷಯ ಮುಚ್ಚಿಟ್ಟಿರುವುದು ತಿಳಿದುಬಂದರೆ ಅಂತಹವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ಇಂತಹವರ ವಿರುದ್ಧ ಸಾರ್ವಜನಿಕರು ಕೂಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಮ್ ಸಂಖ್ಯೆ 0831-2407290 ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿನು ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 