ಕಂಪ್ಲಿ- ಜವುಕು ಗ್ರಾಮದ ಕೃಷಿ ಹೊಂಡದಲ್ಲಿ ಮೊಸಳೆ ಪ್ರತ್ಯಕ್ಷ
Crocodile spotted in agricultural pond in Kampli-Javuku village
ಕಂಪ್ಲಿ: 24 ತಾಲ್ಲೂಕಿನ ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜವುಕು ಗ್ರಾಮದ ರೈತ ವಿಶ್ವೇಶ್ವರರಾವು ಅವರ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಮೊಸಳೆಯೊಂದು ಕಂಡು ಬಂದಿದ್ದು, ಅದನ್ನು ರಕ್ಷಿಸಿ ತುಂಗಭದ್ರಾ ಜಲಾಶಯದಲ್ಲಿ ಬಿಡಲಾಯಿತು.
ಹೊಸಪೇಟೆ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಕೌಶಿಕ್ ದಳವಾಯಿ ಮಾತನಾಡಿ ಕೃಷಿ ಹೊಂಡದಲ್ಲಿ ಮೊಸಳೆ ಇರುವುದು ಅಪರೂಪ.ಬಹುಶಃ ಮಳೆ ನೀರಿನೊಂದಿಗೆ ಬಂದು ಹೊಂಡದಲ್ಲಿ ಸೇರಿರುವ ಸಾಧ್ಯತೆಯಿದೆ. ಕಳೆದ ಮೂರಾ್ನಲ್ಕು ದಿನಗಳ ಹಿಂದೆಯೇ ಜವುಕಿನ ಕೃಷಿ ಹೊಂಡದಲ್ಲಿ ಮೊಸಳೆ ಇರುವುದು ಗಮನಕ್ಕೆ ಬಂದಿತ್ತು. ಮೊಸಳೆಯನ್ನು ಸಿರಗುಪ್ಪದ ವೇಸಗಾರ ಮಲ್ಲಯ್ಯ ರಕ್ಷಿಸಿದ್ದಾರೆ. ಮೊಸಳೆ ಮೂರಡಿ ಉದ್ದವಿದ್ದು, 50 ಕೆ.ಜಿ.ತೂಕವಾಗಿದೆ ಎಂದರು. ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಾಧಿಕಾರಿ ವೀರೇಶ್ ಮಾಶೆಟ್ಟಿ,ಗಸ್ತು ಅರಣ್ಯ ಪಾಲಕ ರವಿಚಂದ್ರ,ವೇಷಗಾರ ಮಲ್ಲಯ್ಯ ಹಾಗೂ ಇತರರು ಇದ್ದರು.
24-ಕಂಪ್ಲಿ-02: ತಾಲ್ಲೂಕಿನ ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜವುಕು ಗ್ರಾಮದ ರೈತ ವಿಶ್ವೇಶ್ವರರಾವು ಅವರ ಕೃಷಿ ಹೊಂಡದಲ್ಲಿ ಪ್ರತ್ಯಕ್ಷವಾದ ಮೊಸಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 