ಬೆಳೆ ವೈವಿಧ್ಯತೆ ತರಬೇತಿ ಕಾರ್ಯಕ್ರಮ
Crop Diversity Training Programme
ಬೆಳೆ ವೈವಿಧ್ಯತೆ ತರಬೇತಿ ಕಾರ್ಯಕ್ರಮ
ಧಾಮಣೆ 21:ಐಸಿಎಆರ್-ಕೆಎಲ್ಇ ಕೃಷಿ ವಿಜ್ಞಾನ ಕೇಂದ್ರ, ಮತ್ತಿಕೊಪ್ಪ ಹಾಗೂ ರಾಷ್ಟ್ರೀಯ ಮಣ್ಣು ಸಮೀಕ್ಷೆ ಹಾಗೂ ಭೂ ಬಳಕೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಧಾಮಣೆ ಗ್ರಾಮದಲ್ಲಿ ಬೆಳೆ ವೈವಿಧ್ಯತೆ ಯೋಜನೆಯ ಕಾರ್ಯಕ್ರಮದ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕೇಂದ್ರದ ವಿಜ್ಞಾನಿ ಡಾ. ಎಸ್. ಎಸ್. ಹಿರೇಮಠ, ಇವರು ಅಧ್ಯಕ್ಷೀಯ ನುಡಿಯಲ್ಲಿ ಸಮಗ್ರ ಕೃಷಿ ಪದ್ಧತಿ, ಮಿಶ್ರ ಬೆಳೆ, ಸಮಗ್ರ ಪೀಡೆ ನಿರ್ವಹಣೆ, ಮಣ್ಣು ಫಲವತ್ತತೆ, ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳ ಬಳಕೆ ಮತ್ತು ಪರಿಸರ ಸ್ನೇಹಿ ತಂತ್ರಜ್ಞಾನಗಳ ಬಳಕೆ ಮಾಡಲು ಕರೆ ನೀಡಿದರು. ರಾಸಾಯನಿಕ ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡಲು ಕರೆ ನೀಡಿದರು. ಅದೇರೀತಿ, ಬೆಂಗಳೂರಿನ ಡಾ. ಚರಣ್ಕುಮಾರ ಜಿ. ಆರ್. ಇವರು ಮಣ್ಣಿನ ಪರೀಕ್ಷೆ ಮಾಡುವ ವಿಧಾನ, ಮಣ್ಣು ಪರೀಕ್ಷೆ ಪ್ರಯೋಜನಗಳ ಜೊತೆಗೆ ರಾಸಾಯನಿಕ ಗೊಬ್ಬರಗಳ ಸಮತೋಲನ ಬಳಕೆ ಮಾಡುವಂತೆ ಮನವಿ ಮಾಡಿದರು. ಡಾ. ಆರ್. ಶ್ರೀನಿವಾಸನ್ ಇವರು ವೈವಿಧ್ಯತೆ ಯೋಜನೆಯ ಕುರಿತು ಸವಿಸ್ತಾರ ಮಾತನಾಡಿ, ಬೆಳೆ ವೈವಿಧ್ಯತೆ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕೀಟನಾಶಕಗಳು, ಶೀಲೀಂದ್ರನಾಶಕಗಳು ಮತ್ತು ಪೋಷಕಾಂಶಗಳ ವಿತರಣೆ ಮಾಡಲಾಯಿತು. ತದನಂತರ ಎಲ್ಲ ಶಿಬಿರಾರ್ಥಿಗಳು ಹಾಗೂ ವಿಜ್ಞಾನಿಗಳು ತಾಕುಗಳಿಗೆ ಭೇಟಿ ನೀಡಿ ಬೆಳೆಯ ಪರೀಕ್ಷೆ ನಡೆಸಿ ರೈತರೊಂದಿಗೆ ಚರ್ಚಿಸಿದರು.
ಕೊನೆಯಲ್ಲಿ ರಾಜೇಶ್ವರಿ ವಂದಿಸಿದರು. ಕಾರ್ಯಕ್ರಮದಲ್ಲಿ 100 ಕ್ಕೂ ಹೆಚ್ಚು ರೈತರು ಹಾಗೂ ರೈತ ಮಹಿಳೆಯರು ಪಾಲ್ಗೊಂಡಿದ್ದರು. ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 