ನಿರಂತರ ಮಳೆಯಿಂದಾಗಿ ಬೆಳೆ ಹಾನಿ: ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
Crop damage due to continuous rain: Inspection by the DC
ಹಾವೇರಿ 08: ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಭಾಗಗಳಲ್ಲಿ ಬೆಳೆ ಹಾನಿಯಾಗಿದ್ದು ಅಂಥ ಜಮೀನುಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಭಾನುವಾರ ಭೇಟಿ ನೀಡಿ ಪರೀಶೀಲಿಸಿದರು. ಬ್ಯಾಡಗಿ, ಹಿರೇಕೆರೂರ ಹಾಗೂ ಹಾನಗಲ್ ತಾಲೂಕುಗಳಿಗೆ ಭೇಟಿ ನೀಡಿ ಹಾಳಾದ ಬೆಳೆಗಳನ್ನು ವೀಕ್ಷಿಸಿದರು ಸಂಬಂಧಿಸಿದ ಅಧಿಕಾರಿಗಳು ಹಾಗೂ ರೈತರಿಂದ ಮಾಹಿತಿ ಪಡೆದುಕೊಂಡರು.
ಜಿಲ್ಲಾಧಿಕಾರಿಗಳು ಕೆಳಗೊಂಡ, ತಡಸ, ಮತ್ತೂರು, ಮಡ್ಲೂರು, ಕಚವಿ, ಚಿನ್ನಮುಳಗುಂದ, ಬಾಳೂರು, ಹನುಮನಹಳ್ಳಿ, ಬಾಳಂಬಿಡ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜಮೀನುಗಳಲ್ಲಿ ನಿರಂತರ ಮಳೆಯಿಂದ ಹಾನಿಯಾದ ಬೆಳೆಗಳನ್ನು ಪರೀಶೀಲಿಸಿ ಹನಿಯಾದ ಬೆಳೆಗಳ ಕುರಿತು ಶೀಘ್ರ ವರದಿ ತಯಾರಿಸಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಬಳಿ ಅಳಲು ತೋಡಿಕೊಂಡ ರೈತರು: ಈ ಬಾರಿ ಉತ್ತಮ ಬೆಳೆ ನೀರೀಕ್ಷೆಯಲ್ಲಿದ್ದೆವು ಆದರೆ ಅತಿಯಾದ ಮಳೆಯಿಂದ ಬೆಳೆದ ಬೆಳೆ ಸಂಪೂರ್ಣ ಹಾನಿಯಾಗಿದೆ. ಸಾಲ ಮಾಡಿ ಬಿತ್ತನೆ ಮಾಡಿದ್ದೇವೆ. ಈ ವರ್ಷ ಉತ್ತಮ ಬೆಳೆ ಬಂದರೆ ನಮ್ಮ ಕಷ್ಟವೆಲ್ಲವೂ ತಿರುತ್ತೇ ಅಂದುಕೊಂಡಿದ್ದೆವು, ಆದರೆ ಈಗ ಪರಿಸ್ಥಿತಿನೇ ಬೇರೆಯಾಗಿದೆ ದಯಮಾಡಿ ತಾವುಗಳು ನಮಗೆ ಬೇಗ ಸರ್ಕಾರದಿಂದ ಬೆಳೆ ಹಾನಿ ಪರಿಹಾರ ಕೊಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಕೇಳಿಕೊಂಡರು.
ಇದಕ್ಕೆ ಪ್ರತಿಕ್ರಿಯಸಿದ ಜಿಲ್ಲಾಧಿಕಾರಿಗಳು ಈಗಾಗಲೇ ಬೆಳೆ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರೀಶೀಲಿಸಿ ವರದಿ ಪಡೆದುಕೊಳ್ಳುತ್ತೇದ್ದೇವೆ ಅಧಿಕಾರಿಗಳಿಗೂ ಶೀಘ್ರ ಬೆಳೆ ಹಾನಿ ಕುರಿತು ವರದಿ ಸಲ್ಲಿಸುವಂತೆ ತಿಳಿಸಿದ್ದೇನೆ. ಶೀಘ್ರ ಸರ್ಕಾರಕ್ಕೆ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಆದ ಹಾನಿ ಕುರಿತು ವರದಿ ಸಲ್ಲಿಸಿ ರೈತರಿಗೆ ಶೀಘ್ರ ಪರಿಹಾರ ನೀಡಲು ಪ್ರಯತ್ನಿಸಲಾಗುವುದು, ಜಿಲ್ಲಾಡಳಿತ ಈ ನಿಟ್ಟಿನಲ್ಲಿ ನಿರಂತರ ಕಾರ್ಯ ಚಟುವಟಿಕೆಯಲ್ಲಿದೆ ಎಂದು ರೈತರಿಗೆ ತಿಳಿಸಿದರು.ಈ ಸಂದರ್ಭದಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಗ್ರಾಮ ಆಡಳಿತ ಅಧಿಕಾರಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 