ಮಳೆ ಅಬ್ಬರಕ್ಕೆ ಬೆಳೆ ಹಾನಿ
Crop damage due to heavy rain
ಶಿಗ್ಗಾವಿ 14 : ತಾಲೂಕಿನಾದ್ಯಂತ ಸತತ ಸುರಿದ ಭಾರಿ ಮಳೆ ಅವಾಂತರ ಸೃಷ್ಟಿಸಿದ್ದು, ಕರೆ-ಕಟ್ಟೆ, ಹಳ್ಳ-ಕೊಳ್ಳ ತುಂಬಿ ಹರಿಯುತ್ತಿದ್ದು, ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳೆಲ್ಲ ನೀರಿನಲ್ಲಿ ನಿಂತಿದ್ದು ರೈತ ಸಮುದಾಯ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.
ಈ ಭಾರಿ ಮುಂಗಾರು ಪೂರ್ವ ಮಳೆ ಚೆನ್ನಾಗಿ ಆಗಿದ್ದರಿಂದ ಜಿಲ್ಲೆಯಲ್ಲಿ ಶೇ.50ರಷ್ಟು ರೈತರು ಪ್ರಮುಖವಾಗಿ ಹೆಸರು, ಮೆಕ್ಕೆಜೋಳ, ಹತ್ತಿ, ಶೇಂಗಾ, ಜೋಳ ಸೇರಿದಂತೆ ಮತ್ತಿತರ ಬೆಳೆಗಳನ್ನು ಬಿತ್ತನೆ ಮಾಡಿದ್ದರು. ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮಳೆ ಅಬ್ಬರಿಸಿದ್ದು, ತಗ್ಗು ಪ್ರದೇಶದ ಮನೆಗಳಿಗೆ, ಹೊಲಗಳಿಗೆ ನೀರು ನುಗ್ಗಿ ಸಾಕಷ್ಟು ಪ್ರಮಾಣದಲ್ಲಿ ನಷ್ಟವಾಗಿದೆ. ಬುಧವಾರ, ಗುರುವಾರ, ಶುಕ್ರವಾರ ಸಂಜೆಯಿಂದ ನಿರಂತರ 4-6 ಗಂಟೆಗಳ ಕಾಲ ಸುರಿದ ಮಳೆಗೆ ಮೆಕ್ಕೆಜೋಳ, ಹೆಸರು, ಸಸಿಗಳು, ಅಡಿಕೆ, ಬಿತ್ತನೆ ಮಾಡಿದ ಸೋಯಾಬಿನ್ ನೀರಿನಲ್ಲಿ ನಿಂತಿದ್ದರೆ, ಇನ್ನೂ ಕೆಲವು ರೈತರು ಎರಡು ದಿನಗಳ ಹಿಂದೆ ಬಿತ್ತನೆ ಮಾಡಿದ್ದವರು ಪರಿಸ್ಥಿತಿ ಇದೆ ಆಗಿದೆ. ಜಮೀನು ಹದಗೊಳಿಸಿ, ಬೀಜ ಗೊಬ್ಬರ ಖರೀದಿ ಪ್ರತಿ ಎಕರೆಗೆ ಸಾವಿರಾರು ಖರ್ಚು ಮಾಡಿದ್ದ ರೈತರಿಗೆ ಮಳೆಯ ಅಬ್ಬರ ದಿಕ್ಕು ತೋಚದಂತಾಗಿದೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳೆಗಳು ಸಂಪೂರ್ಣ ನೀರಿನಲ್ಲಿ ನಿಂತುಕೊಂಡಿವೆ.
ಜಿಲ್ಲಾಡಳಿತದ ಸೂಚನೆಯ ಪ್ರಕಾರ ತಾಲೂಕಿನಲ್ಲಿ ಹೆಚ್ಚಿನ ಮಳೆಯಾಗಿದ್ದು, ರಾಜ್ಯ ಹವಾಮಾನ ಇಲಾಖೆ ವರದಿಯಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸಹ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ತಾಲೂಕಿನ ತಹಶಿಲ್ದಾರ ಸೇರಿದಂತೆ ಕೃಷಿ ಅಧಿಕಾರಿಗಳು ಕ್ರಮ ಕೈಗೊಂಡರೆ ಮುಂದೆ ಆಗುವ ಭಾರಿ ಪ್ರಮಾಣದ ಬೆಳೆಹಾನಿಯನ್ನು ತಡೆಯಬಹುದು ಎಂದು ರೈತ ಮುಖಂಡರ ಅಭಿಪ್ರಾಯವಾಗಿದೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 