ಮಹಾಕುಂಭ ಮೇಳದಿಂದ ಕಾಶಿಗೆ ತೆರಳುತ್ತಿದ್ದ ಕ್ರೂಸರ್ ಅಪಘಾತ: ಮೂವರ ಸಾವು
Cruiser going from Mahakumbha Mela to Kashi mishap: Three killed
ಬೀದರ್ 21: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಿಂದ ಕಾಶಿಗೆ ತೆರಳುತ್ತಿದ್ದ ಬೀದರ್ ನ ನಿವಾಸಿಗಳಿದ್ದ ಕ್ರೂಸರ್ ಅಪಘಾತವಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಉತ್ತರ ಪ್ರದೇಶದ ಕಾಶಿ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಬೀದರ್ ನ ಮೂರು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ. ಮೃತ ಮತ್ತು ಗಾಯಾಳುಗಳು ಬೀದರ್ ನ ಲಾಡಗೇರಿಯ ನಿವಾಸಿಗಳು ಎಂದು ತಿಳಿದು ಬಂದಿದೆ.
ನಗರದ ಲಾಡಗೇರಿ ನಿವಾಸಿಗಳಾದ ಲಕ್ಷ್ಮಿ (57), ನೀಲಮ್ಮಾ (62), ಸಂತೋಷಕುಮಾರ (45), ಸುನೀತಾ (40), ಕಲಾವತಿ ಹ (40) ಮೃತಪಟ್ಟವರು.
ಸುಲೋಚನಾ, ಸುಜಾತ, ಕವಿತಾ, ಅನಿತಾ, ಖುಷಿ, ಗಣೇಶ, ಸಾಯಿ, ಭಗವಂತ ಹಾಗೂ ಶಿವಾ ಗಾಯಗೊಂಡವರು.
ವಾರಾಣಸಿಯ ರೂಪಾಪೂರ ಬಳಿ ಶುಕ್ರವಾರ ನಸುಕಿನ ಜಾವ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕುಂಭಮೇಳದ ಭಕ್ತರಿದ್ದ ಕ್ರೂಸರ್ ಡಿಕ್ಕಿ ಹೊಡೆದಿದ್ದು, ವಾಹನ ನುಜ್ಜುಗುಜ್ಜಾಗಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 