ಮಹಾಕುಂಭ ಮೇಳದಿಂದ ಕಾಶಿಗೆ ತೆರಳುತ್ತಿದ್ದ ಕ್ರೂಸರ್ ಅಪಘಾತ: ಮೂವರ ಸಾವು
Cruiser going from Mahakumbha Mela to Kashi mishap: Three killed
ಬೀದರ್ 21: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಿಂದ ಕಾಶಿಗೆ ತೆರಳುತ್ತಿದ್ದ ಬೀದರ್ ನ ನಿವಾಸಿಗಳಿದ್ದ ಕ್ರೂಸರ್ ಅಪಘಾತವಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಉತ್ತರ ಪ್ರದೇಶದ ಕಾಶಿ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಬೀದರ್ ನ ಮೂರು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ. ಮೃತ ಮತ್ತು ಗಾಯಾಳುಗಳು ಬೀದರ್ ನ ಲಾಡಗೇರಿಯ ನಿವಾಸಿಗಳು ಎಂದು ತಿಳಿದು ಬಂದಿದೆ.
ನಗರದ ಲಾಡಗೇರಿ ನಿವಾಸಿಗಳಾದ ಲಕ್ಷ್ಮಿ (57), ನೀಲಮ್ಮಾ (62), ಸಂತೋಷಕುಮಾರ (45), ಸುನೀತಾ (40), ಕಲಾವತಿ ಹ (40) ಮೃತಪಟ್ಟವರು.
ಸುಲೋಚನಾ, ಸುಜಾತ, ಕವಿತಾ, ಅನಿತಾ, ಖುಷಿ, ಗಣೇಶ, ಸಾಯಿ, ಭಗವಂತ ಹಾಗೂ ಶಿವಾ ಗಾಯಗೊಂಡವರು.
ವಾರಾಣಸಿಯ ರೂಪಾಪೂರ ಬಳಿ ಶುಕ್ರವಾರ ನಸುಕಿನ ಜಾವ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕುಂಭಮೇಳದ ಭಕ್ತರಿದ್ದ ಕ್ರೂಸರ್ ಡಿಕ್ಕಿ ಹೊಡೆದಿದ್ದು, ವಾಹನ ನುಜ್ಜುಗುಜ್ಜಾಗಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 