ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಿ: ಡಾ ಎಂ ಧರ್ಮಣ್ಣ
Cultivate a Scientific Mind: Dr M Dharmanna
ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಿ: ಡಾ ಎಂ ಧರ್ಮಣ್ಣ
ಹೂವಿನ ಹಡಗಲಿ 28: ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದು ತುಂಗಭದ್ರಾ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಡಾ. ಧರ್ಮಣ್ಣ ಹೇಳಿದರು .ಪಟ್ಟಣದ ತುಂಗಭದ್ರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಪ್ರಶ್ನೆ ಮಾಡುವುದರ ಮೂಲಕ ತಾರ್ಕಿಕತೆ ಮತ್ತು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಂಡು, ಮೌಡ್ಯತೆ ಮತ್ತು ಅಂಧಕಾರದಿಂದ ದೂರ ಉಳಿಯಬೇಕು. ಸಿ ವಿ ರಾಮನ್, ಮೇಡಂ ಕ್ಯೂರಿ, ಐಸಾಕ್ ನ್ಯೂಟನ್, ಅಬ್ದುಲ್ ಕಲಾಂ ರವರ ಜೀವನ ನಿಮಗೆ ಆದರ್ಶ ಆಗಲಿ ಎಂದು ತಿಳಿಸಿದರು.ಮುಖ್ಯ ಗುರು ಎಸ್ ಮಂಜುನಾಥ್ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳು ವೈಜ್ಞಾನಿಕ ತಳಹದಿಯ ಮೇಲೆ ಬದುಕನ್ನು ಕಟ್ಟಿಕೊಳ್ಳುಬೇಕು ಎಂದು ಹೇಳಿದರು. ಶಿಕ್ಷಕರಾದ ಕೆ. ಮೊಹಿದ್ದೀನ್ ರವರು ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಪ್ರತಿಜ್ಞಾವಿಧಿಯನ್ನು ಬೋಧಿಸಿದರುಶಿಕ್ಷಕರಾದ ಜೆ. ಸುವರ್ಣ, ಕೆ.ಎಮ್. ಉಮಾ, ಚಾಂದಿನಿ, ಕಲ್ಲನ ಗೌಡ ನಿಸ್ಸಾರ್ ಅಹಮದ್ ಇತರರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ನಗ್ಮಾ ಮತ್ತು ಹೆಚ್. ಪವಿತ್ರ ನಿರ್ವಹಿಸಿದರು. ಆಯ್ದ ವಿದ್ಯಾರ್ಥಿಗಳು ರಾಷ್ಟ್ರೀಯ ವಿಜ್ಞಾನ ದಿನದ ಬಗ್ಗೆ ಭಾಷಣ ಮಾಡಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 