ನಾಡು-ನುಡಿ ಜಾಗೃತಿ ಬೆಳೆಸಿಕೊಳ್ಳಿ: ಶಂಕರ ಹಲಗತ್ತಿ
Cultivate awareness of the language: Shankar Halagatti
ಗದಗ 23: ವಿದ್ಯಾರ್ಥಿಗಳು ಕನ್ನಡನಾಡಿನ ಅಸ್ಮಿತೆಯನ್ನು ಅರ್ಥೈಸಿಕೊಳ್ಳಲು ನಾಡು-ನುಡಿಯ ಕುರಿತು ಗೌರವ ಹೊಂದಬೇಕೆಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು. ಅವರು ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯುಎಸಿ, ಸಾಂಸ್ಕೃತಿಕ ಘಟಕ ಮತ್ತು ಕನ್ನಡ ವಿಭಾಗ ಹಾಗೂ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಕನ್ನಡ-ಕನ್ನಡಿಗ-ಕರ್ನಾಟಕ ನಾಡು-ನುಡಿ ಜಾಗೃತಿ ಮತ್ತು ಗೀತಗಾಯನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ ವಿದ್ಯಾರ್ಥಿಗಳು ನಾಡು-ನುಡಿಯ ಜಾಗೃತಿಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಮುಖ್ಯ ಅತಿಥಿ ಹುಲಕೋಟಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ. ಅರ್ಜುನ ಗೊಳಸಂಗಿ, ಸಂಪನ್ಮೂಲ ವ್ಯಕ್ತಿ ಗದುಗಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಶಿವಪ್ಪ ಕುರಿ, ವಿದ್ಯಾವರ್ಧಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ವೀರಣ್ಣ, ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯೆ ಪ್ರೊ. ಸುಧಾ ಕೌಜಗೇರಿ ಅವರು ಕನ್ನಡ ಭಾಷೆ, ನಾಡಿನ ಹಿರಿಮೆ ಮತ್ತು ಕರ್ನಾಟಕ ಏಕೀಕರಣದಲ್ಲಿ ವಿದ್ಯಾವರ್ಧಕ ಸಂಘದ ಪಾತ್ರದ ಕುರಿತು ಮಾತನಾಡಿದರು. ಇಂಗ್ಲಿಷ ವಿಭಾಗದ ಪ್ರಾಧ್ಯಾಪಕಿ ಮಹಾನಂದಾ ಹಿರೇಮಠ ಅತಿಥಿಗಳನ್ನು ಸ್ವಾಗತಿಸಿದರು. ಸಾಂಸ್ಕೃತಿಕ ಘಟಕದ ಸಂಚಾಲಕ ರಮೇಶ ಹುಲಕುಂದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಐಕ್ಯುಎಸಿ ಘಟಕದ ಸಹಸಂಚಾಲಕ ಡಾ. ಮಂಜುನಾಥ ತ್ಯಾಲಗಡಿ ವಂದನಾರೆ್ನಗೈದರು. ಕನ್ನಡ ವಿಭಾಗದ ಪ್ರಾಧ್ಯಾಪಕ ಭೀಮೇಶ ನಿರೂಪಣೆ ಮಾಡಿದರು. ಕೊತಬಾಳದ ಶಂಕರಣ್ಣ ಸಂಕಣ್ಣವರ ಅವರ ಜಾನಪದ ತಂಡವು ನಾಡು-ನುಡಿಯ ಕುರಿತಾದ ಜಾನಪದ ಗೀತೆಗಳನ್ನು ಹಾಡಿ ಸಭೆಯನ್ನು ರೋಮಾಂಚನಗೊಳಿಸಿದರು.
ಕಾರ್ಯಕ್ರಮದಲ್ಲಿ ಕಲಾ ವಿಭಾಗದ ಮುಖ್ಯಸ್ಥ ಮತ್ತು ಎನ್.ಎಸ್.ಎಸ್. ಘಟಕದ ಕಾರ್ಯಕ್ರಮ ಅಧಿಕಾರಿ ಪ್ರೊ. ಅಪ್ಪಣ್ಣ ಹಂಜೆ, ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಉಲ್ಲಾಸ ಶೆಟ್ಟಿ, ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಲಕ್ಷ್ಮಣ ಮುಳಗುಂದ ಮತ್ತು ಎಲ್ಲ ಬೋಧಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 