ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಸಾಂಸ್ಕೃತಿಕ ಚಟುವಟಿಕೆ ಸಹಕಾರಿ : ದುಂಡಿಗೌಡ್ರ

ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಸಾಂಸ್ಕೃತಿಕ ಚಟುವಟಿಕೆ ಸಹಕಾರಿ : ದುಂಡಿಗೌಡ್ರ Cultural activities contribute to the all-round development of students: Dundigowdra

ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಸಾಂಸ್ಕೃತಿಕ ಚಟುವಟಿಕೆ ಸಹಕಾರಿ : ದುಂಡಿಗೌಡ್ರ 

ಶಿಗ್ಗಾವಿ  18 : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾಭ್ಯಾಸದ ಜೊತೆಗೆ ವಿವಿಧ ರೀತಿಯ ಕೌಶಲ್ಯಗಳನ್ನು ಬೆಳೆಸಿಕೊಂಡಾಗ ಮಾತ್ರ ಜೀವನದಲ್ಲಿ ನಮ್ಮ ಗುರಿ ತಲುಪಲು ಸಾಧ್ಯವೆಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.  ಪಟ್ಟಣದ ಜೆ ಎಂ ಜೆ ಶಾಲೆಯಲ್ಲಿ ಏರಿ​‍್ಡಸಿದ್ದ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಪ್ರತಿಭೆ ನಮ್ಮ ಸ್ಪರ್ಧೆ ಕೇವಲ ಶಿಗ್ಗಾವಿ ನಗರಕ್ಕೆ ಮಾತ್ರ ಸೀಮಿತವಾಗಿರದೆ ಅಂತರಾಷ್ಟ್ರೀಯ ಮಟ್ಟದಲ್ಲೂ ಸ್ಪರ್ಧೆ ಮಾಡುವ ಸಾಮರ್ಥ್ಯ ಬೆಳೆಸಿಕೊಂಡಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು. ಮುಖ್ಯೋಪಾಧ್ಯಾಯೆ ಎನಿಜಾರ್ಜ, ಸಿಸ್ಟರ್ ಪ್ರಮೀಳಾ, ಸಿಸ್ಟರ್ ಇಸ್ಟರರಾಣಿ ಹಾಗೂ ಶಿಕ್ಷಕ ಶಿಕ್ಷಕಿಯರು ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.