ಮಕ್ಕಳ ಬೆಳವಣಿಗೆಗೆ ಸಾಂಸ್ಕೃತಿಕ ಕಾರ್ಯಕ್ರಮ ಅಗತ್ಯ: ಗೆಜ್ಜಿ
Cultural programs are necessary for children's development: Gezzi
ಮಕ್ಕಳ ಬೆಳವಣಿಗೆಗೆ ಸಾಂಸ್ಕೃತಿಕ ಕಾರ್ಯಕ್ರಮ ಅಗತ್ಯ: ಗೆಜ್ಜಿ
ದೇವರಹಿಪ್ಪರಗಿ 02: ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಾಗಿವೆ. ಶೈಕ್ಷಣಿಕ ಕಾರ್ಯಕ್ರಮಗಳ ಜೊತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಬೇಕು ಎಂದು ವಿಜಯಪುರ ಗೆಜ್ಜಿ ಕರಿಯರ್ ಅಕಾಡೆಮಿ ಸಂಸ್ಥಾಪಕ ಸುರೇಶ ಗೆಜ್ಜಿ ಹೇಳಿದರು.
ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಎ.ಬಿ.ಸಾಲಕ್ಕಿ ಕಲಾ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಮಾಧ್ಯಮಿಕ ವಿಭಾಗದ 2025-26ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್, ಇ.ಎಲ್.ಸಿ ಹಾಗೂ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಅತಿಥಿಗಳಾಗಿ ಕ್ರೀಡಾ ವಿಭಾಗ ಉದ್ಘಾಟಿಸಿ ಮಾತನಾಡಿದ ಅವರು,ದೈಹಿಕ ಸ್ವಾಸ್ಥ್ಯದಿಂದ ಮಾತ್ರ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ದೈಹಿಕ ಆರೋಗ್ಯಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ಪೂರಕ. ಈ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ಹಂತದಲ್ಲಿಯೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಇದರಿಂದ ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆ ದೊರೆಯುವಂತಾಗಿದೆ ಎಂದು ಹೇಳಿದರು.
ಸ್ಥಳೀಯ ಸಂಸ್ಥೆಯ ಸಲಹಾ ಸಮಿತಿಯ ಅಧ್ಯಕ್ಷರಾದ ಜಿ.ಬಿ.ಸಾಲಕ್ಕಿ ಅವರು ಮಾತನಾಡಿ, ಪಟ್ಟಣದ ಎ.ಬಿ.ಸಾಲಕ್ಕಿ ಸಂಸ್ಥೆ ಪೂರ್ವಜರಿಂದ ನಿರ್ಮಾಣಗೊಂಡು ಶತಮಾನ ಕಂಡ ವಿಜಯಪುರದ ಬಿ. ಎಲ್. ಡಿ. ಇ. ಸಂಸ್ಥೆಯ ಪರಿಶ್ರಮದಿಂದ ದೊಡ್ಡ ವೃಕ್ಷವಾಗಿ ಬೆಳೆದು ಅದರ ಜ್ಞಾನದ ಬೀಜಗಳು ನಾಡಿನಾದ್ಯಂತ ಹೆಸರಾಗಿದೆ. ಈ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಿ.ಬಿ.ಎಸ್.ಸಿ ಶಿಕ್ಷಣ ಜೊತೆ ಇನ್ನೂ ಹೆಚ್ಚಿನ ವಿಭಾಗಗಳು ಹಾಗೂ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವುದರ ಜೊತೆ ಗುಣಾತ್ಮಕ ಶಿಕ್ಷಣಕ್ಕಾಗಿ ಸಂಸ್ಥೆಯ ಎಲ್ಲಾ ಶಿಕ್ಷಕ ವೃಂದ ಶ್ರಮಿಸುತ್ತಿದೆ ಎಂದು ಹೇಳಿದರು.
ಅಧ್ಯಕ್ಷತೆಯನ್ನು ಸಂಸ್ಥೆಯ ಮುಖ್ಯ ಅಧೀಕ್ಷಕ ಎಸ್.ಎ. ಬಿರಾದಾರ(ಕನ್ನಾಳಗೌಡರು) ಜ್ಯೋತಿ ಬಯಸುವ ಮೂಲಕ ಚಾಲನೆ ನೀಡಿದರು.
ಮುಖ್ಯ ಅತಿಥಿಗಳಾಗಿ ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥ ಡಾ. ಪ್ರಭುಗೌಡ ಲಿಂಗದಳ್ಳಿ (ಚಬನೂರ) ಅವರ ಅನುಪಸ್ಥಿತಿಯಲ್ಲಿ ಅವರ ತಂದೆ ಬಿ.ಬಿ. ಪಾಟೀಲ್ ಅವರು ನೂತನ ಎನ್.ಎಸ್.ಎಸ್ ಘಟಕವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಟಿ-ಶರ್ಟ್ ವಿತರಿಸಿದರು.
ಪ್ರಾಸ್ತಾವಿಕವಾಗಿ ಸಂಸ್ಥೆಯ ಪ್ರಾಚಾರ್ಯ ವ್ಹಿ.ಜಿ.ಹೂನಳ್ಳಿ ಅವರು ಮಾತನಾಡಿ, ಸಂಸ್ಥೆಯಲ್ಲಿ ಗುಣಾತ್ಮಕ ಶಿಕ್ಷಣದ ಜೊತೆ ಕ್ರೀಡಾ, ಸಾಂಸ್ಕೃತಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಲು ವೇದಿಕೆ ನಿರ್ಮಾಣ ಮಾಡಿದ್ದೇವೆ ಎಂದರು.
2025ನೇ ಸಾಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪುರಸ್ಕೃತರು ಹಾಗೂ ತಾಲೂಕು ವರದಿಗಾರ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತರು ಹಾಗೂ ವಿಜಯಪುರ ಪದವಿಪೂರ್ವ ಉಪನಿರ್ದೇಶಕರ ಕಾರ್ಯಾಲಯದ ಶಾಖಾಧಿಕಾರಿ ಪ್ರಕಾಶ.ಟಿ.ಗೊಂಗಡಿ ಹಾಗೂ ಸ್ಥಳೀಯ ಸಿದ್ದೇಶ್ವರ ಸ್ವಾಮೀಜಿ ಸಂಸ್ಥೆಯ ಮುಖ್ಯಸ್ಥರು ಹಾಗೂ ಬಸವ ಚೇತನ ಪ್ರಶಸ್ತಿ ಪುರಸ್ಕೃತ ವ್ಹಿ.ಕೆ.ಪಾಟೀಲ ಅವರಿಗೆ ವಿಶೇಷವಾಗಿ ಸನ್ಮಾನಿಸಿ, ಗೌರವಿಸಲಾಯಿತು.
ಸಂಸ್ಥೆಯ ಮುಖ್ಯ ಗುರುಗಳಾದ ವ್ಹಿ.ಎಂ.ಪಾಟೀಲ, ಗಣ್ಯ ವ್ಯಾಪಾರಸ್ಥರಾದ ಕಾಶಿನಾಥ ಸಾಲಕ್ಕಿ, ಸುರೇಶ ಮಣೂರ, ಶರಣಪ್ಪ ಸಾಲಕ್ಕಿ, ಸಾಹೇಬಗೌಡ ಬಿರಾದಾರ, ಸಂಸ್ಕೃತಿಕ ವಿಭಾಗದ ಅಧ್ಯಕ್ಷ ಎಸ್.ಎಂ.ಕಿಣಗಿ, ಕೆ.ವ್ಹಿ.ಸಾಲಿಮಠ, ಕ್ರೀಡಾ ವಿಭಾಗದ ಅಧ್ಯಕ್ಷ ಐ.ಬಿ.ಬಿದರಿ, ಕೆ.ವ್ಹಿ.ಒಡೆಯರ ಸೇರಿದಂತೆ ಉಪನ್ಯಾಸಕರು, ಶಿಕ್ಷಕರು, ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಿರೂಪಣೆ ಉಪನ್ಯಾಸಕಿ ವ್ಹಿ.ಆರ್. ಹಿರೇಮಠ, ಸ್ವಾಗತವನ್ನು ವಿದ್ಯಾರ್ಥಿನಿ ಪ್ರತಿಭಾ ಬಿರಾದಾರ ಹಾಗೂ ವಿದ್ಯಾರ್ಥಿ ಪ್ರಜ್ವಲ ನಾಲತವಾಡ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 