ಪರಿಸರ ಸಂರಕ್ಷಣೆ ಜಾಗೃತಿಗಾಗಿ ಸೈಕಲ್ ಯಾತ್ರೆ
ಬೆಂಗಳೂರು, ಡಿ.19 ಮಹಾತ್ಮ ಗಾಂಧೀಜಿ ಅವರ 150ನೇ ವರ್ಷಾಚರಣೆ ಅಂಗವಾಗಿ ಪರಿಸರ ಸಂರಕ್ಷಣೆ, ಕೋಮು ಸೌಹಾರ್ದತೆ ಕುರಿತು ಜನರಲ್ಲಿ ಅರಿವು ಮೂಡಿಸಲು ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೆ "ಪರ್ಯಾವರಣ್ ಜಾಗೃತ್ ಅಭಿಯಾನ್" ಹೆಸರಿನಲ್ಲಿ ಸೈಕಲ್ ಯಾತ್ರೆ ಹಮ್ಮಿಕೊಂಡಿರುವುದಾಗಿ ಎವಿಕೆ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಿರ್ದೇಶಕ ಡಾ.ಸಾನಂದ್ ಕುಮಾರ್ ಸಿಂಗ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ಸಮಾಜದ ಕಾಳಜಿ ಕುಗ್ಗುತ್ತಿದ್ದು, ಅವರಲ್ಲಿ ಪರಿಸರ ಸ್ವಚ್ಛತೆ, ಅರಣ್ಯ ಸಂರಕ್ಷಣೆ ಸೇರಿದಂತೆ ಹಲವು ವಿಚಾರಗಳಲ್ಲಿ ಅರಿವು ಮೂಡಿಸಲು 12 ಜನರೊಂದಿಗೆ ಈ ಸೈಕಲ್ ಯಾತ್ರೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.ಸೈಕಲ್ ಯಾತ್ರೆಯನ್ನು ಕಳೆದ ಅಕ್ಟೋಬರ್ 2 ರಂದು ಜಮ್ಮುವಿನ ಗಾಂಧಿ ಚೌಕದಲ್ಲಿ ಪ್ರಾರಂಭಿಸಿದ್ದು, ಜ.30ಕ್ಕೆ ಕನ್ಯಾಕುಮಾರಿಯ ಗಾಂಧಿ ಮೆಮೊರಿಯಲ್ ಭವನದಲ್ಲಿ ಕೊನೆಗೊಳ್ಳಲಿದೆ ಎಂದರು. ಈಗಾಗಲೇ ದೇಶದ ಅನೇಕ ರಾಜ್ಯಗಳನ್ನು ಸುತ್ತಾಡಿ ಅಲ್ಲಿನ ಪ್ರಮುಖ ಶಾಲಾ, ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಪನ್ಯಾಸಗಳು ಹಾಗೂ ವಿಚಾರ ಸಂಕಿರಣಗಳನ್ನು ನಡೆಸುವ ಮೂಲಕ ಜಾಗೃತಿ ಮೂಡಿಸಲಾಗಿದೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಎವಿಕೆ ಸಮೂಹ ಸಂಸ್ಥೆಯ ಮುಖ್ಯಸ್ಥ ಡಾ.ರಾಜೀವ್ ರೈ, ಕೆವಿ ನಾಗರಾಜು ಮೂರ್ತಿ ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 