ಸೈಕ್ಲಿಂಗ್ ಸ್ಪರ್ಧೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಸೈಕ್ಲಿಂಗ್ ಸ್ಪರ್ಧೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆ Cycling competition: Selection for the national level

ದೇವರ ಹಿಪ್ಪರಗಿ 24: ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಾರ್ಯಾಲಯ ಪದವಿ ಪೂರ್ವ ಇಲಾಖೆ ಬಾಗಲಕೋಟ ಹಾಗೂ ಕುಮ್ಮಕಲಿ ಕಾಲೇಜು ಮುಧೋಳ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಸ್ಥಳೀಯ ಬಿ ಎಲ್ ಡಿ ಈ ಸಂಸ್ಥೆಯ ಎ.ಬಿ.ಸಾಲಕ್ಕಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಹಣಮಂತ ಹುಲ್ಲಿಕೇರಿ 20ಕಿ.ಮೀ ರಸ್ತೆ ರೈಸನಲ್ಲಿ ದ್ವೀತಿಯ ಸ್ಥಾನ ಗಳಿಸಿ ರಾಷ್ಟ್ರ ಮಟಕ್ಕೆ  ಆಯ್ಕೆಯಾಗಿದ್ದಾನೆ ಎಂದು ಪ್ರಾಚಾರ್ಯರಾದ ವ್ಹಿ.ಜಿ.ಹೂನ್ನಳ್ಳಿ ತಿಳಿಸಿದ್ದಾರೆ. 

ಎ.ಬಿ. ಸಾಲಕ್ಕಿ ಪದವಿ ಪೂರ್ವ ಕಾಲೇಜಿನ ಒಬ್ಬ ವಿದ್ಯಾರ್ಥಿ ಹಾಗೂ ಒಬ್ಬಳು ವಿದ್ಯಾರ್ಥಿನಿ ಭಾಗವಹಿಸಿ ಮಹಾವಿದ್ಯಾಲಯದ ಕೀರ್ತಿಯನ್ನು ರಾಷ್ಟ್ರ ಮಟ್ಟದವರೆಗೆ ಕೊಂಡೊಯ್ದು ವಿದ್ಯಾರ್ಥಿಗಳ ಸಾಧನೆಗೆ ನಮ್ಮ ಬಿ ಎಲ್ ಡಿ ಈ ಸಂಸ್ಥೆಯ ಅದ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು .ಸ್ಥಳೀಯ ಸಲಹಾ ಸಮಿತಿಯ ಅಧ್ಯಕ್ಷರು, ಎಲ್ಲಾ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ ಎಂದು ಕಾಲೇಜಿನ ದೈಹಿಕ ಉಪನ್ಯಾಸಕರಾದ ಕೆ.ವ್ಹಿ.ಒಡೆಯರ ತಿಳಿಸಿದ್ದಾರೆ.